ರಾಜ್ಯ

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸಿಬ್ಬಂದಿ ಆಡಳಿತ ಮತ್ತು ಸುಧಾರಣಾ ಇಲಾಖೆ (DPAR) ವಿವಿಧ ಇಲಾಖೆಗಳ ಮುಖ್ಯಸ್ಥರು, ಉಪ ಆಯುಕ್ತರು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಪಟ್ಟಿ ಮಾಡಿದೆ.

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕೆಲವು ನೌಕರರು ಅಸಭ್ಯವಾಗಿ ಬಟ್ಟೆ ಧರಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಡಿಪಿಎಆರ್ ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನೌಕರರಿಗೆ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಹೇಳಲಾಗಿದ್ದರೂ, ಅನೇಕರು ಸೂಚನೆಗಳನ್ನು ಪಾಲಿಸುತ್ತಿಲ್ಲ. ನಾವು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ:-ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಕಾರ್ಪೊರೇಟ್ ಕಚೇರಿಗಳಿಗಿಂತ ಭಿನ್ನವಾಗಿ, ಸರ್ಕಾರಿ ನೌಕರರಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದಾಗ್ಯೂ, ಕೆಲವು ಯುವಜನತೆ ಕಾಲೇಜಿಗೆ ಹೋಗುವವರಂತೆ ಬಟ್ಟೆ ಧರಿಸುತ್ತಾರೆ, ಇದು ಸ್ವೀಕಾರಾರ್ಹವಲ್ಲ. ಹರಿದ ಜೀನ್ಸ್, ತೋಳಿಲ್ಲದ ಉಡುಪುಗಳು ಮತ್ತು ತುಂಬಾ ಬಿಗಿಯಾದ ಬಟ್ಟೆಗಳನ್ನು ಧರಿಸಿಕೊಂಡು ಬರುತ್ತಾರೆ ಎಂದು ಅಧಿಕಾರಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದರು.

ಚಲನಾ ರಿಜಿಸ್ಟರ್ ನೌಕರರು ಕಚೇರಿಯಲ್ಲಿ ಎಷ್ಟು ಹೊತ್ತು ಇರುತ್ತಾರೆ, ಹೇಗೆ ಕೆಲಸ ಮಾಡುತ್ತಾರೆ ಎಂದು ಪತ್ತೆಹಚ್ಚುವುದಾಗಿರುತ್ತದೆ. ಉದ್ಯೋಗಿ ಬೆಳಗ್ಗೆ 10:10 ರೊಳಗೆ ಕಚೇರಿಯಲ್ಲಿರಬೇಕು ಮತ್ತು ಕೆಲಸದ ಸಮಯ ಮುಗಿಯುವವರೆಗೆ ತಮ್ಮ ಸೀಟಿನಲ್ಲಿರಬೇಕು. ಅಧಿಕೃತ ಕರ್ತವ್ಯದ ಮೇಲೆ ಹೋಗುತ್ತಿದ್ದರೆ ಅದನ್ನು ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಹೇಳುತ್ತದೆ.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

14 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

16 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

18 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

18 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

19 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

19 hours ago