ಚಿತ್ರದುರ್ಗ: ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದಲ್ಲಿರುವ ಮಾದರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಶಸ್ತ್ರಾಸ್ತ್ರ ಬಿಟ್ಟು ಶರಣಾಗಿದ್ದಾರೆ. ಇದರಿಂದ ಇನ್ನು ಹೆಚ್ಚಾಗಿ ನಕ್ಸಲರು ಇರಬಹುದು ಎನ್ನುವ ಪ್ರಶ್ನೆ ಮೂಡಿದೆ. ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ. ಕೋರ್ಟ್, ಪೊಲೀಸರ ಮುಂದೆ ನಕ್ಸಲರನ್ನು ನಿಲ್ಲಿಸಿದರೆ ನಿಜಾಂಶ ತಿಳಿಯುತ್ತದೆ ಎಂದು ಹೇಳಿದ್ದಾರೆ.
ಈ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪೈಪೋಟಿಯಲ್ಲಿ ಬಿದ್ದಿದ್ದಾರೆ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ ಎಂದರು.
ಈ ಪಕ್ಷದಲ್ಲಿ ದಲಿತ ಮಾಫಿಯಾ ಇದೆ. ಖರ್ಗೆ, ಮುನಿಯಪ್ಪ, ಎಚ್.ಸಿ. ಮಹದೇವಪ್ಪ ಅವರ ಕುಟುಂಬಗಳು ಕಾಂಗ್ರೆಸ್ನಲ್ಲಿ ಹಿಡಿತ ಸಾಧಿಸಿವೆ. ಇವರನ್ನ ಹೊರತುಪಡಿಸಿ ಇನ್ನು ಯಾವ ದಲಿತ ನಾಯಕರಿಗೂ ಕಾಂಗ್ರೆಸ್ನಲ್ಲಿ ಬೆಳೆಯಲು ಅವಕಾಶ ಇಲ್ಲದಂತಾಗಿದೆ. ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ ಎಂದು ಕಿಡಿಕಾರಿದರು.
ಇನ್ನು ಮುಡಾ ಹಗರಣದಲ್ಲಿ ಜಿಟಿಡಿ ಫ್ಯಾಮಿಲಿ ಸೈಟ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದು 14 ಸೈಟ್ಗಳ ವಿಚಾರವಲ್ಲ, ಸಾವಿರಾರು ಸೈಟ್ಗಳ ವಿಚಾರ. ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ನಿಜಾಂಶ ಹೊರಬರಲಿದೆ. ಇದರಲ್ಲಿ ನಮ್ಮವರು, ತಮ್ಮವರು ಎಂಬ ಪ್ರಶ್ನೆಯೆ ಇಲ್ಲ. ನಮ್ಮ ಸಂಬಂಧಿಗಳು ಇದ್ದರು ನಾನು ಇದನ್ನೇ ಮಾತನಾಡುವುದು. ಜನಪರ ವ್ಯವಸ್ಥೆ ಆಗಬೇಕೆ ಹೊರತು, ಕುಟುಂಬದ ಸ್ವಾರ್ಥದ ವ್ಯವಸ್ಥೆ ಆಗಬಾರದು ಎಂದು ಹೇಳಿದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…