ಚಿತ್ರದುರ್ಗ: ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದಲ್ಲಿರುವ ಮಾದರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಶಸ್ತ್ರಾಸ್ತ್ರ ಬಿಟ್ಟು ಶರಣಾಗಿದ್ದಾರೆ. ಇದರಿಂದ ಇನ್ನು ಹೆಚ್ಚಾಗಿ ನಕ್ಸಲರು ಇರಬಹುದು ಎನ್ನುವ ಪ್ರಶ್ನೆ ಮೂಡಿದೆ. ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ. ಕೋರ್ಟ್, ಪೊಲೀಸರ ಮುಂದೆ ನಕ್ಸಲರನ್ನು ನಿಲ್ಲಿಸಿದರೆ ನಿಜಾಂಶ ತಿಳಿಯುತ್ತದೆ ಎಂದು ಹೇಳಿದ್ದಾರೆ.
ಈ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪೈಪೋಟಿಯಲ್ಲಿ ಬಿದ್ದಿದ್ದಾರೆ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ ಎಂದರು.
ಈ ಪಕ್ಷದಲ್ಲಿ ದಲಿತ ಮಾಫಿಯಾ ಇದೆ. ಖರ್ಗೆ, ಮುನಿಯಪ್ಪ, ಎಚ್.ಸಿ. ಮಹದೇವಪ್ಪ ಅವರ ಕುಟುಂಬಗಳು ಕಾಂಗ್ರೆಸ್ನಲ್ಲಿ ಹಿಡಿತ ಸಾಧಿಸಿವೆ. ಇವರನ್ನ ಹೊರತುಪಡಿಸಿ ಇನ್ನು ಯಾವ ದಲಿತ ನಾಯಕರಿಗೂ ಕಾಂಗ್ರೆಸ್ನಲ್ಲಿ ಬೆಳೆಯಲು ಅವಕಾಶ ಇಲ್ಲದಂತಾಗಿದೆ. ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ ಎಂದು ಕಿಡಿಕಾರಿದರು.
ಇನ್ನು ಮುಡಾ ಹಗರಣದಲ್ಲಿ ಜಿಟಿಡಿ ಫ್ಯಾಮಿಲಿ ಸೈಟ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದು 14 ಸೈಟ್ಗಳ ವಿಚಾರವಲ್ಲ, ಸಾವಿರಾರು ಸೈಟ್ಗಳ ವಿಚಾರ. ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ನಿಜಾಂಶ ಹೊರಬರಲಿದೆ. ಇದರಲ್ಲಿ ನಮ್ಮವರು, ತಮ್ಮವರು ಎಂಬ ಪ್ರಶ್ನೆಯೆ ಇಲ್ಲ. ನಮ್ಮ ಸಂಬಂಧಿಗಳು ಇದ್ದರು ನಾನು ಇದನ್ನೇ ಮಾತನಾಡುವುದು. ಜನಪರ ವ್ಯವಸ್ಥೆ ಆಗಬೇಕೆ ಹೊರತು, ಕುಟುಂಬದ ಸ್ವಾರ್ಥದ ವ್ಯವಸ್ಥೆ ಆಗಬಾರದು ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…