ರಾಜ್ಯ

ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ನಗರದಲ್ಲಿರುವ ಮಾದರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಶಸ್ತ್ರಾಸ್ತ್ರ ಬಿಟ್ಟು ಶರಣಾಗಿದ್ದಾರೆ. ಇದರಿಂದ ಇನ್ನು ಹೆಚ್ಚಾಗಿ ನಕ್ಸಲರು ಇರಬಹುದು ಎನ್ನುವ ಪ್ರಶ್ನೆ ಮೂಡಿದೆ. ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ. ಕೋರ್ಟ್‌, ಪೊಲೀಸರ ಮುಂದೆ ನಕ್ಸಲರನ್ನು ನಿಲ್ಲಿಸಿದರೆ ನಿಜಾಂಶ ತಿಳಿಯುತ್ತದೆ ಎಂದು ಹೇಳಿದ್ದಾರೆ.

ಈ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪೈಪೋಟಿಯಲ್ಲಿ ಬಿದ್ದಿದ್ದಾರೆ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ ಎಂದರು.

ಈ ಪಕ್ಷದಲ್ಲಿ ದಲಿತ ಮಾಫಿಯಾ ಇದೆ. ಖರ್ಗೆ, ಮುನಿಯಪ್ಪ, ಎಚ್‌.ಸಿ. ಮಹದೇವಪ್ಪ ಅವರ ಕುಟುಂಬಗಳು ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸಿವೆ. ಇವರನ್ನ ಹೊರತುಪಡಿಸಿ ಇನ್ನು ಯಾವ ದಲಿತ ನಾಯಕರಿಗೂ ಕಾಂಗ್ರೆಸ್‌ನಲ್ಲಿ ಬೆಳೆಯಲು ಅವಕಾಶ ಇಲ್ಲದಂತಾಗಿದೆ. ಕಾಂಗ್ರೆಸ್‌ ನಾಶವಾಗುವ ಸ್ಥಿತಿಯಲ್ಲಿದೆ ಎಂದು ಕಿಡಿಕಾರಿದರು.

ಇನ್ನು ಮುಡಾ ಹಗರಣದಲ್ಲಿ ಜಿಟಿಡಿ ಫ್ಯಾಮಿಲಿ ಸೈಟ್‌ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದು 14 ಸೈಟ್‌ಗಳ ವಿಚಾರವಲ್ಲ, ಸಾವಿರಾರು ಸೈಟ್‌ಗಳ ವಿಚಾರ. ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ನಿಜಾಂಶ ಹೊರಬರಲಿದೆ. ಇದರಲ್ಲಿ ನಮ್ಮವರು, ತಮ್ಮವರು ಎಂಬ ಪ್ರಶ್ನೆಯೆ ಇಲ್ಲ. ನಮ್ಮ ಸಂಬಂಧಿಗಳು ಇದ್ದರು ನಾನು ಇದನ್ನೇ ಮಾತನಾಡುವುದು. ಜನಪರ ವ್ಯವಸ್ಥೆ ಆಗಬೇಕೆ ಹೊರತು, ಕುಟುಂಬದ ಸ್ವಾರ್ಥದ ವ್ಯವಸ್ಥೆ ಆಗಬಾರದು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

10 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

15 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

20 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

26 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago