ರಾಜ್ಯ

ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು: ಸಿದ್ದರಾಮಯ್ಯ

ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಘೋಷಿಸಿದರು.

ಮಂಗಳವಾರ (ಆ.27) ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ ಎನ್ನುವ ಸೂಚನೆ ನೀಡಿದರು.

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು.

ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.

ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದರು.

ನಾನು ಬಜೆಟ್ ನಲ್ಲಿ ಹೇಳಿದ್ದನ್ನು ಜಾರಿ ಮಾಡಿ: ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

5 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

5 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

5 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

5 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

5 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

6 hours ago