Mysore
20
clear sky

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಸಚಿವ ಪ್ರಿಯಾಂಕ್‌ ಖರ್ಗೆಗೆ ಭದ್ರತೆ ಹೆಚ್ಚಿಸಿದ ಸರ್ಕಾರ

MLC Ravikumar should be in NIMHANS Minister Priyank Kharge

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವರಿಗೆ ಹೆಚ್ಚಿನ ಭದ್ರತೆ ಒದಗಿಸಿದೆ.

ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ತಮಗೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ನಿವಾಸ ಹಾಗೂ ಸಚಿವರಿಗೆ ಭದ್ರತಾ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿತ್ತು.

ಇದೀಗ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಸಚಿವರಿಗೆ ಬೆಂಗಾವಲು ವಾಹನ ನೀಡಿ, ಭದ್ರತೆಯನ್ನು ಇನ್ನಷ್ಟು ಹೆಚ್ಚಳ ಮಾಡಲಾಗಿದೆ.

ಇಂದಿನಿಂದ ಸಚಿವರಿಗೆ ಎಸ್ಕಾರ್ಟ್‌ ಸಿಬ್ಬಂದಿಯನ್ನು ಗೃಹ ಇಲಾಖೆ ನೀಡಿದೆ.

Tags:
error: Content is protected !!