ರಾಜ್ಯ

ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ : ಬಿಎಸ್‌ವೈ

ತುಮಕೂರು : ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿಲ್ಲ. ಬರ ವೀಕ್ಷಣೆ ಮಾಡಿಲ್ಲ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಕೆಎಸ್ಎಫ್‌ಸಿ ಆವರಣದಲ್ಲಿ ನಡೆಯುತ್ತಿರುವ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ವಿದ್ಯುತ್ ಕಣ್ಣಾಮುಚ್ಚಾಲೆ, ತೆರಿಗೆ ಜಾಸ್ತಿ ಮಾಡಿ ಸಂಕಷ್ಟ ತಂದಿದ್ದಾರೆ. ವಿದ್ಯುತ್ ದರ ಹೆಚ್ಟಾಗಿ ಸಣ್ಣ ಕೈಗಾರಿಕೆಗಳು ನೆಲ ಕಚ್ಚಿವೆ ಸಂಬಂಧಪಟ್ಟವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಕೂಡ ಬೌನ್ಸ್ ಆಗಿದೆ. ಅಷ್ಟರ ಮಟ್ಟಿಗೆ ಸರ್ಕಾರ ದಿವಾಳಿ ಯಾಗಿದೆ. ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿಯೇ ಪರಿಶಿಷ್ಟರ ಅಂತ್ಯ ಸಂಸ್ಕಾರದ ಚೆಕ್ ಬೌನ್ಸ್ ಆಗಿದೆ ಎಂದು ಹರಿಹಾಯ್ದರು.

ಮಾಜಿ ಸಿಎಂ‌ ಬಿಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆ ತುಮಕೂರಿಗೆ ಭೇಟಿ ನೀಡಿದ್ದು, ಬರ ವೀಕ್ಷಣೆಗೂ ಮೊದಲು ಸಂವಾದದಲ್ಲಿ ಭಾಗವಹಿಸಿದ್ದಾರೆ. ಯಡಿಯೂರಪ್ಪಗೆ ಶಾಸಕ ಸುರೇಶ್ ಗೌಡ, ಜಿ.ಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ, ಗುಬ್ಬಿ ತಾಲ್ಲೂಕಿನ ಚೇಳೂರು, ಶಿರಾ ತಾಲ್ಲೂಕಿನ ಓಜನಕುಂಟೆಯಲ್ಲಿ ಬರ ಅಧ್ಯಯನ ಮಾಡಲಿದ್ದಾರೆ. ನಂತರ ರೈತರೊಂದಿಗೆ ಯಡಿಯೂರಪ್ಪ ಸಂವಾದ ನಡೆಸಲಿದ್ದಾರೆ.

lokesh

Recent Posts

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

14 mins ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

21 mins ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

37 mins ago

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

3 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

4 hours ago