ತುಮಕೂರು : ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿಲ್ಲ. ಬರ ವೀಕ್ಷಣೆ ಮಾಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಕೆಎಸ್ಎಫ್ಸಿ ಆವರಣದಲ್ಲಿ ನಡೆಯುತ್ತಿರುವ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ವಿದ್ಯುತ್ ಕಣ್ಣಾಮುಚ್ಚಾಲೆ, ತೆರಿಗೆ ಜಾಸ್ತಿ ಮಾಡಿ ಸಂಕಷ್ಟ ತಂದಿದ್ದಾರೆ. ವಿದ್ಯುತ್ ದರ ಹೆಚ್ಟಾಗಿ ಸಣ್ಣ ಕೈಗಾರಿಕೆಗಳು ನೆಲ ಕಚ್ಚಿವೆ ಸಂಬಂಧಪಟ್ಟವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಕೂಡ ಬೌನ್ಸ್ ಆಗಿದೆ. ಅಷ್ಟರ ಮಟ್ಟಿಗೆ ಸರ್ಕಾರ ದಿವಾಳಿ ಯಾಗಿದೆ. ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿಯೇ ಪರಿಶಿಷ್ಟರ ಅಂತ್ಯ ಸಂಸ್ಕಾರದ ಚೆಕ್ ಬೌನ್ಸ್ ಆಗಿದೆ ಎಂದು ಹರಿಹಾಯ್ದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆ ತುಮಕೂರಿಗೆ ಭೇಟಿ ನೀಡಿದ್ದು, ಬರ ವೀಕ್ಷಣೆಗೂ ಮೊದಲು ಸಂವಾದದಲ್ಲಿ ಭಾಗವಹಿಸಿದ್ದಾರೆ. ಯಡಿಯೂರಪ್ಪಗೆ ಶಾಸಕ ಸುರೇಶ್ ಗೌಡ, ಜಿ.ಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ, ಗುಬ್ಬಿ ತಾಲ್ಲೂಕಿನ ಚೇಳೂರು, ಶಿರಾ ತಾಲ್ಲೂಕಿನ ಓಜನಕುಂಟೆಯಲ್ಲಿ ಬರ ಅಧ್ಯಯನ ಮಾಡಲಿದ್ದಾರೆ. ನಂತರ ರೈತರೊಂದಿಗೆ ಯಡಿಯೂರಪ್ಪ ಸಂವಾದ ನಡೆಸಲಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…