ರಾಜ್ಯ

ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ : ಬಿಎಸ್‌ವೈ

ತುಮಕೂರು : ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿಲ್ಲ. ಬರ ವೀಕ್ಷಣೆ ಮಾಡಿಲ್ಲ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಕೆಎಸ್ಎಫ್‌ಸಿ ಆವರಣದಲ್ಲಿ ನಡೆಯುತ್ತಿರುವ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ವಿದ್ಯುತ್ ಕಣ್ಣಾಮುಚ್ಚಾಲೆ, ತೆರಿಗೆ ಜಾಸ್ತಿ ಮಾಡಿ ಸಂಕಷ್ಟ ತಂದಿದ್ದಾರೆ. ವಿದ್ಯುತ್ ದರ ಹೆಚ್ಟಾಗಿ ಸಣ್ಣ ಕೈಗಾರಿಕೆಗಳು ನೆಲ ಕಚ್ಚಿವೆ ಸಂಬಂಧಪಟ್ಟವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಕೂಡ ಬೌನ್ಸ್ ಆಗಿದೆ. ಅಷ್ಟರ ಮಟ್ಟಿಗೆ ಸರ್ಕಾರ ದಿವಾಳಿ ಯಾಗಿದೆ. ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿಯೇ ಪರಿಶಿಷ್ಟರ ಅಂತ್ಯ ಸಂಸ್ಕಾರದ ಚೆಕ್ ಬೌನ್ಸ್ ಆಗಿದೆ ಎಂದು ಹರಿಹಾಯ್ದರು.

ಮಾಜಿ ಸಿಎಂ‌ ಬಿಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆ ತುಮಕೂರಿಗೆ ಭೇಟಿ ನೀಡಿದ್ದು, ಬರ ವೀಕ್ಷಣೆಗೂ ಮೊದಲು ಸಂವಾದದಲ್ಲಿ ಭಾಗವಹಿಸಿದ್ದಾರೆ. ಯಡಿಯೂರಪ್ಪಗೆ ಶಾಸಕ ಸುರೇಶ್ ಗೌಡ, ಜಿ.ಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ, ಗುಬ್ಬಿ ತಾಲ್ಲೂಕಿನ ಚೇಳೂರು, ಶಿರಾ ತಾಲ್ಲೂಕಿನ ಓಜನಕುಂಟೆಯಲ್ಲಿ ಬರ ಅಧ್ಯಯನ ಮಾಡಲಿದ್ದಾರೆ. ನಂತರ ರೈತರೊಂದಿಗೆ ಯಡಿಯೂರಪ್ಪ ಸಂವಾದ ನಡೆಸಲಿದ್ದಾರೆ.

lokesh

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

6 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

7 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

8 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

8 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

8 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

9 hours ago