ತುಮಕೂರು : ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿಲ್ಲ. ಬರ ವೀಕ್ಷಣೆ ಮಾಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಕೆಎಸ್ಎಫ್ಸಿ ಆವರಣದಲ್ಲಿ ನಡೆಯುತ್ತಿರುವ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ವಿದ್ಯುತ್ ಕಣ್ಣಾಮುಚ್ಚಾಲೆ, ತೆರಿಗೆ ಜಾಸ್ತಿ ಮಾಡಿ ಸಂಕಷ್ಟ ತಂದಿದ್ದಾರೆ. ವಿದ್ಯುತ್ ದರ ಹೆಚ್ಟಾಗಿ ಸಣ್ಣ ಕೈಗಾರಿಕೆಗಳು ನೆಲ ಕಚ್ಚಿವೆ ಸಂಬಂಧಪಟ್ಟವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಕೂಡ ಬೌನ್ಸ್ ಆಗಿದೆ. ಅಷ್ಟರ ಮಟ್ಟಿಗೆ ಸರ್ಕಾರ ದಿವಾಳಿ ಯಾಗಿದೆ. ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿಯೇ ಪರಿಶಿಷ್ಟರ ಅಂತ್ಯ ಸಂಸ್ಕಾರದ ಚೆಕ್ ಬೌನ್ಸ್ ಆಗಿದೆ ಎಂದು ಹರಿಹಾಯ್ದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆ ತುಮಕೂರಿಗೆ ಭೇಟಿ ನೀಡಿದ್ದು, ಬರ ವೀಕ್ಷಣೆಗೂ ಮೊದಲು ಸಂವಾದದಲ್ಲಿ ಭಾಗವಹಿಸಿದ್ದಾರೆ. ಯಡಿಯೂರಪ್ಪಗೆ ಶಾಸಕ ಸುರೇಶ್ ಗೌಡ, ಜಿ.ಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ, ಗುಬ್ಬಿ ತಾಲ್ಲೂಕಿನ ಚೇಳೂರು, ಶಿರಾ ತಾಲ್ಲೂಕಿನ ಓಜನಕುಂಟೆಯಲ್ಲಿ ಬರ ಅಧ್ಯಯನ ಮಾಡಲಿದ್ದಾರೆ. ನಂತರ ರೈತರೊಂದಿಗೆ ಯಡಿಯೂರಪ್ಪ ಸಂವಾದ ನಡೆಸಲಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…