ತುಮಕೂರು : ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿಲ್ಲ. ಬರ ವೀಕ್ಷಣೆ ಮಾಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಕೆಎಸ್ಎಫ್ಸಿ ಆವರಣದಲ್ಲಿ ನಡೆಯುತ್ತಿರುವ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ವಿದ್ಯುತ್ ಕಣ್ಣಾಮುಚ್ಚಾಲೆ, ತೆರಿಗೆ ಜಾಸ್ತಿ ಮಾಡಿ ಸಂಕಷ್ಟ ತಂದಿದ್ದಾರೆ. ವಿದ್ಯುತ್ ದರ ಹೆಚ್ಟಾಗಿ ಸಣ್ಣ ಕೈಗಾರಿಕೆಗಳು ನೆಲ ಕಚ್ಚಿವೆ ಸಂಬಂಧಪಟ್ಟವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಪರಿಶಿಷ್ಟರ ಅಂತ್ಯಕ್ರಿಯೆಗೆ ಕೊಟ್ಟ ಚೆಕ್ ಕೂಡ ಬೌನ್ಸ್ ಆಗಿದೆ. ಅಷ್ಟರ ಮಟ್ಟಿಗೆ ಸರ್ಕಾರ ದಿವಾಳಿ ಯಾಗಿದೆ. ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿಯೇ ಪರಿಶಿಷ್ಟರ ಅಂತ್ಯ ಸಂಸ್ಕಾರದ ಚೆಕ್ ಬೌನ್ಸ್ ಆಗಿದೆ ಎಂದು ಹರಿಹಾಯ್ದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆ ತುಮಕೂರಿಗೆ ಭೇಟಿ ನೀಡಿದ್ದು, ಬರ ವೀಕ್ಷಣೆಗೂ ಮೊದಲು ಸಂವಾದದಲ್ಲಿ ಭಾಗವಹಿಸಿದ್ದಾರೆ. ಯಡಿಯೂರಪ್ಪಗೆ ಶಾಸಕ ಸುರೇಶ್ ಗೌಡ, ಜಿ.ಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ, ಗುಬ್ಬಿ ತಾಲ್ಲೂಕಿನ ಚೇಳೂರು, ಶಿರಾ ತಾಲ್ಲೂಕಿನ ಓಜನಕುಂಟೆಯಲ್ಲಿ ಬರ ಅಧ್ಯಯನ ಮಾಡಲಿದ್ದಾರೆ. ನಂತರ ರೈತರೊಂದಿಗೆ ಯಡಿಯೂರಪ್ಪ ಸಂವಾದ ನಡೆಸಲಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…