ರಾಜ್ಯ

ಪೆನ್‌ಡ್ರೈವ್‌ ಪ್ರಕರಣ: ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ್‌

ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ ಎಂದರು.

ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದರು.

ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

25 mins ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

37 mins ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

52 mins ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

58 mins ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

1 hour ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

1 hour ago