ರಾಜ್ಯ

ಪೆನ್‌ಡ್ರೈವ್‌ ಪ್ರಕರಣ: ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ್‌

ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ ಎಂದರು.

ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದರು.

ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

6 mins ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

12 mins ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

29 mins ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

1 hour ago

ಕೃಷಿ ಪದವಿ ಪಡೆಯಲು ಸುವರ್ಣ ಅವಕಾಶ : 50% ಮೀಸಲು, ಏಪ್ರಿಲ್ 29ಕ್ಕೆ ಪ್ರಾಯೋಗಿಕ ಪರೀಕ್ಷೆ

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…

2 hours ago

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…

2 hours ago