ರಾಜ್ಯ

ರೆಸಾರ್ಟ್‌ಗಳಲ್ಲಿ ಭದ್ರತೆಗಾಗಿ ಸುತ್ತೋಲೆ ಹೊರಡಿಸಿದ ಸರ್ಕಾರ

ಬೆಂಗಳೂರು: ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್‌, ಹೋಂಸ್ಟೇಗಳಲ್ಲಿ ಭದ್ರತೆ ಮತ್ತು ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕೊಪ್ಪಳದ ಸಣಾಪುರ ರೆಸಾರ್ಟ್‌ ಮಾಲಕಿ ಹಾಗೂ ಇಸ್ರೇಲ್‌ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಕಾರಣ ರೆಸಾರ್ಟ್‌ ಹೋಮ್‌ಸ್ಟೇಗಳಲ್ಲಿ ಭದ್ರತೆ, ಸುರಕ್ಷತೆ ಕುರಿತು ಕ್ರಮ ತೆಗೆದುಕೊಳ್ಳಬೇಕೆಂದು ಕರ್ನಾಟಕ ಗೃಹ ಇಲಾಖೆ ಆದೇಶ ಹೊರಡಿಸಿದೆ.

ರೆಸಾರ್ಟ್‌ನಲ್ಲಿ ಉಳಿದುಕೊಳ್ಳುವ ಪ್ರವಾಸಿಗರ ಸುರಕ್ಷತೆ ಬಗ್ಗೆ ಮಾಲೀಕರು ಕ್ರಮ ತೆಗೆದುಕೊಳ್ಳಬೇಕು. ಹಾಗೆಯೇ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವಾಗ ಪೊಲೀಸ್‌ ಠಾಣೆಗೆ ಅಥವಾ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಅನುಮತಿ ಪಡೆಯುವುದು ಕಡ್ಡಾಯ ಎಂದು ಖಡಕ್‌ ಸೂಚನೆ ನೀಡಿದೆ.

ಇನ್ನು ಕೊಪ್ಪಳದ ಗ್ಯಾಂಗ್‌ರೇಪ್‌ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯನವರು ಕಂಡಿಸಿದ್ದು, ಸಿಎಂ ಸೂಚನೆ ಮೇರೆಗೆ ಭದ್ರತೆಗಾಗಿ ಸುತ್ತೋಲೆ ಹೊರಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ  ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…

46 mins ago

ಬೀದಿ ನಾಯಿಗಳ ಹಾವಳಿ; ಬಸವಳಿದ ಜನತೆ

ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…

55 mins ago

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

1 hour ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

14 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

14 hours ago