ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಜು.1 ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಹಲವು ದಿನಗಳಿಂದ ಚಾಲನೆಯಲ್ಲಿದ್ದ ಪ್ರಕ್ರಿಯೆಗಳು ಅಂತಿಮ ಹಂತಕ್ಕೆ ಬಂದಿದ್ದು, ಕೊನೆಗೂ ಸರ್ಕಾರಿ ಆದೇಶ ಹೊರಬಿದ್ದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ದೂರಿಗೆ ಹಿತೈಷಿ ಹಾಡಲು ನೂತನ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯ ಹಾರ್ಡ್ ವೇರ್ – ಸಾಪ್ಟ್ ವೇರ್ಗಳೂ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣಿಕರಣವನ್ನು ಅವಲಂಬಿಸಿದೆ. ಹಾಡ್ರ್ವೇರ್ ಸಾಧನಗಳಿಗೆ ಆಗಾಗ್ಗೆ ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದೆ. ಇದು ಗಣನೀಯ ವೆಚ್ಚಗಳಿಗೆ ಕಾರಣವಾಗಿತ್ತು. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಂಬಂಧಿ ದೂರ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಇದು ಸಹಕಾರಿಯಾಗಿರಲಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಹೊಸ ಸೌಲಭ್ಯದಲ್ಲಿ ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ರಾಜ್ಯದ 12 ಸಾವಿರ ಆರೋಗ್ಯ ಸಂಸ್ಥೆಗಳನ್ನೊಳಗೊಂಡು ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಆಡಳಿತದ ಚೌಕಟ್ಟಿನಲ್ಲಿ ಮೊಬೈಲ್ ಹಾಜರಾತಿ ವ್ಯವಸ್ಥೆಯಿದ್ದು, ಇನ್ನು ಮುಂದೆ ವೈದ್ಯರ ಕರಾರುವಕ್ಕಾದ ಲಭ್ಯತೆಯನ್ನು ಸರ್ಕಾರ ಖಾತ್ರಿಪಡಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…