ರಾಜ್ಯ

ವೈದ್ಯರಿಗೆ ಮೊಬೈಲ್‌ ಹಾಜರಾತಿ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಜು.1 ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹಲವು ದಿನಗಳಿಂದ ಚಾಲನೆಯಲ್ಲಿದ್ದ ಪ್ರಕ್ರಿಯೆಗಳು ಅಂತಿಮ ಹಂತಕ್ಕೆ ಬಂದಿದ್ದು, ಕೊನೆಗೂ ಸರ್ಕಾರಿ ಆದೇಶ ಹೊರಬಿದ್ದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ದೂರಿಗೆ ಹಿತೈಷಿ ಹಾಡಲು ನೂತನ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯ ಹಾರ್ಡ್ ವೇರ್ – ಸಾಪ್ಟ್ ವೇರ್‍ಗಳೂ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣಿಕರಣವನ್ನು ಅವಲಂಬಿಸಿದೆ. ಹಾಡ್ರ್ವೇರ್ ಸಾಧನಗಳಿಗೆ ಆಗಾಗ್ಗೆ ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದೆ. ಇದು ಗಣನೀಯ ವೆಚ್ಚಗಳಿಗೆ ಕಾರಣವಾಗಿತ್ತು. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಂಬಂಧಿ ದೂರ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಇದು ಸಹಕಾರಿಯಾಗಿರಲಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಹೊಸ ಸೌಲಭ್ಯದಲ್ಲಿ ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ರಾಜ್ಯದ 12 ಸಾವಿರ ಆರೋಗ್ಯ ಸಂಸ್ಥೆಗಳನ್ನೊಳಗೊಂಡು ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಆಡಳಿತದ ಚೌಕಟ್ಟಿನಲ್ಲಿ ಮೊಬೈಲ್ ಹಾಜರಾತಿ ವ್ಯವಸ್ಥೆಯಿದ್ದು, ಇನ್ನು ಮುಂದೆ ವೈದ್ಯರ ಕರಾರುವಕ್ಕಾದ ಲಭ್ಯತೆಯನ್ನು ಸರ್ಕಾರ ಖಾತ್ರಿಪಡಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

3 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

3 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

3 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

13 hours ago