ರಾಜ್ಯ

ಗ್ಯಾರಂಟಿ ಸಮಿತಿಯ ಸದಸ್ಯರಿಗೆ ಸರ್ಕಾರದ ಹಣ: ವಿಪಕ್ಷಗಳಿಂದ ತೀವ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಉಸ್ತುವಾರಿಗೆ ನೇಮಿಸಿರುವ ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಸದಸ್ಯರಿಗೆ ಸರ್ಕಾರದ, ಸಾರ್ವಜನಿಕರ ಹಣವನ್ನು ಸಂಬಳವಾಗಿ ನೀಡುತ್ತಿರುವುದರ ವಿರುದ್ಧ ವಿಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಮೇಲುಸ್ತುವಾರಿ ನೋಡಿಕೊಳ್ಳಲು ಶಾಸಕ ಎಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ.

ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ಪ್ರಸ್ತಾಪಿಸಿ ಕಾಂಗ್ರೆಸ್‌ ಸಂಬಳ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಇದಕ್ಕೆ ಶಾಸಕ ಸುನೀಲ್‌ ಕುಮಾರ್‌ ಕೂಡ ಧ್ವನಿಗೂಡಿಸಿದರು.

ಈ ವೇಳೆ ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು, ಡಿಕೆ ಶಿವಕುಮಾರ್‌ ಅಧ್ಯಕ್ಷರಾದ ಮೇಲೆ ಸರ್ಕಾರಕ್ಕೂ, ಕಾಂಗ್ರೆಸ್‌ಗೂ ವ್ಯತ್ಯಾಸವೇ ಇಲ್ಲದಂತಾಗಿದೆ. ಸಾರ್ವಜನಿಕರ ದುಡ್ಡನ್ನು ತೆಗೆದುಕೊಂಡು ಅಲ್ಲಿಗೆ ಹಂಚೋದು ಸರಿಯಲ್ಲ. ಬೇಕಾದರೆ ಭಿಕ್ಷೆ ಬೇಡಿ ಅವರಿಗೆ ದುಡ್ಡು ಕೊಡಲಿ ಎಂದು ಕಿಡಿಕಾರಿದರು.

ಯಾವ ಆಧಾರದ ಮೇಲೆ ನೇಮಕಾತಿ ಮಾಡ್ತೀರಾ? ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಇಲ್ಲಿವರೆಗೂ ಯಾವ ಮುಖ್ಯಮಂತ್ರಿಯೂ, ಅಧ್ಯಕ್ಷರು ಈ ಕೆಲಸ ಮಾಡಿರಲಿಲ್ಲ. ಮನೆಹಾಳು ಕೆಲಸ ಮಾಡುತ್ತಿರುವುದು ಇವರು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ, 52 ಸಾವಿರ ಕೋಟಿ ಯೋಜನೆಗಳನ್ನು ನಿರ್ವಹಣೆ ಮಾಡುವುದು ಸುಲಭವಲ್ಲ ಹೀಗಾಗಿ ಸಮಿತಿ ರಚನೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

2 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

3 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

3 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

3 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

3 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

3 hours ago