ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಉಸ್ತುವಾರಿಗೆ ನೇಮಿಸಿರುವ ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಸದಸ್ಯರಿಗೆ ಸರ್ಕಾರದ, ಸಾರ್ವಜನಿಕರ ಹಣವನ್ನು ಸಂಬಳವಾಗಿ ನೀಡುತ್ತಿರುವುದರ ವಿರುದ್ಧ ವಿಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೇಲುಸ್ತುವಾರಿ ನೋಡಿಕೊಳ್ಳಲು ಶಾಸಕ ಎಚ್.ಎಂ ರೇವಣ್ಣ ಅವರ ನೇತೃತ್ವದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ.
ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ಪ್ರಸ್ತಾಪಿಸಿ ಕಾಂಗ್ರೆಸ್ ಸಂಬಳ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಇದಕ್ಕೆ ಶಾಸಕ ಸುನೀಲ್ ಕುಮಾರ್ ಕೂಡ ಧ್ವನಿಗೂಡಿಸಿದರು.
ಈ ವೇಳೆ ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಡಿಕೆ ಶಿವಕುಮಾರ್ ಅಧ್ಯಕ್ಷರಾದ ಮೇಲೆ ಸರ್ಕಾರಕ್ಕೂ, ಕಾಂಗ್ರೆಸ್ಗೂ ವ್ಯತ್ಯಾಸವೇ ಇಲ್ಲದಂತಾಗಿದೆ. ಸಾರ್ವಜನಿಕರ ದುಡ್ಡನ್ನು ತೆಗೆದುಕೊಂಡು ಅಲ್ಲಿಗೆ ಹಂಚೋದು ಸರಿಯಲ್ಲ. ಬೇಕಾದರೆ ಭಿಕ್ಷೆ ಬೇಡಿ ಅವರಿಗೆ ದುಡ್ಡು ಕೊಡಲಿ ಎಂದು ಕಿಡಿಕಾರಿದರು.
ಯಾವ ಆಧಾರದ ಮೇಲೆ ನೇಮಕಾತಿ ಮಾಡ್ತೀರಾ? ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಇಲ್ಲಿವರೆಗೂ ಯಾವ ಮುಖ್ಯಮಂತ್ರಿಯೂ, ಅಧ್ಯಕ್ಷರು ಈ ಕೆಲಸ ಮಾಡಿರಲಿಲ್ಲ. ಮನೆಹಾಳು ಕೆಲಸ ಮಾಡುತ್ತಿರುವುದು ಇವರು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, 52 ಸಾವಿರ ಕೋಟಿ ಯೋಜನೆಗಳನ್ನು ನಿರ್ವಹಣೆ ಮಾಡುವುದು ಸುಲಭವಲ್ಲ ಹೀಗಾಗಿ ಸಮಿತಿ ರಚನೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…