ರಾಜ್ಯ

ಶೀಘ್ರವೇ ಸರ್ಕಾರಿ ಮಾಂಟೆಸ್ಸರಿ ಯೋಜನೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಭದ್ರಾವತಿ: ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇಡೀ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಕೇಂದ್ರ ಸರ್ಕಾರ ಕೂಡ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರು ನಮ್ಮ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂಥ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ ಎಂದರು.

ಸಕ್ಷಮ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ 170 ಕೋಟಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಜೊತೆಯಾಗಿ ನಿರ್ವಹಿಸಲಾಗುವುದು ಎಂದರು.

ಡ್ಯಾಂಗಳ ಭದ್ರತೆಗೆ ಸಿಎಂ, ಡಿಸಿಎಂ ಸೂಚನೆ
ರಾಜ್ಯದ ಬಹುತೇಕ ಜಲಾಶಯಗಳು 100 ವರ್ಷ, 50 ವರ್ಷ ಪೂರೈಸಿವೆ. ಹೀಗಾಗಿ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದು ಸಹಜ. ತುಂಗಭದ್ರಾ ಡ್ಯಾಂ ಗೇಟ್‌ನ ಚೈನ್ ಕಟ್ ಆಗಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯ ಎಂದು ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಎಲ್ಲಾ ಜಲಾಶಯಗಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕಾಂಗ್ರೆಸ್ ನವರು 50 ವರ್ಷದಲ್ಲಿ ಏನು ಮಾಡಿದ್ದಾರೆ ಎಂದು ಬಿಜೆಪಿ ಕೇಳುತ್ತಿದೆ. ಡ್ಯಾಂ ಕಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಡ್ಯಾಂ ದುರಸ್ತಿ ಆಗಬೇಕಿದೆ. ಎಲ್ಲಾ ಡ್ಯಾಂ ನಲ್ಲೂ ಸಣ್ಣ ಪುಟ್ಟ ಲೋಪ ಇವೆ. ಮುಂಜಾಗ್ರತಾ ಕ್ರಮ ಏನೇನು ಆಗಬೇಕೋ ಅದನ್ನು ನಮ್ಮ ಸರ್ಕಾರ ತೆಗೆದುಕೊಳ್ಳುತ್ತದೆ ಎಂದರು.

ಭಾಗ್ಯಲಕ್ಷ್ಮೀ ಬಾಂಡ್ ಸ್ಥಗಿತಗೊಂಡಿಲ್ಲ
ಭಾಗ್ಯಲಕ್ಷ್ಮಿ ಬಾಂಡ್ ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

39 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

1 hour ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago