ರಾಜ್ಯ

ಶೀಘ್ರವೇ ಸರ್ಕಾರಿ ಮಾಂಟೆಸ್ಸರಿ ಯೋಜನೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಭದ್ರಾವತಿ: ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇಡೀ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಕೇಂದ್ರ ಸರ್ಕಾರ ಕೂಡ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರು ನಮ್ಮ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂಥ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ ಎಂದರು.

ಸಕ್ಷಮ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ 170 ಕೋಟಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಜೊತೆಯಾಗಿ ನಿರ್ವಹಿಸಲಾಗುವುದು ಎಂದರು.

ಡ್ಯಾಂಗಳ ಭದ್ರತೆಗೆ ಸಿಎಂ, ಡಿಸಿಎಂ ಸೂಚನೆ
ರಾಜ್ಯದ ಬಹುತೇಕ ಜಲಾಶಯಗಳು 100 ವರ್ಷ, 50 ವರ್ಷ ಪೂರೈಸಿವೆ. ಹೀಗಾಗಿ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದು ಸಹಜ. ತುಂಗಭದ್ರಾ ಡ್ಯಾಂ ಗೇಟ್‌ನ ಚೈನ್ ಕಟ್ ಆಗಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯ ಎಂದು ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಎಲ್ಲಾ ಜಲಾಶಯಗಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕಾಂಗ್ರೆಸ್ ನವರು 50 ವರ್ಷದಲ್ಲಿ ಏನು ಮಾಡಿದ್ದಾರೆ ಎಂದು ಬಿಜೆಪಿ ಕೇಳುತ್ತಿದೆ. ಡ್ಯಾಂ ಕಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಡ್ಯಾಂ ದುರಸ್ತಿ ಆಗಬೇಕಿದೆ. ಎಲ್ಲಾ ಡ್ಯಾಂ ನಲ್ಲೂ ಸಣ್ಣ ಪುಟ್ಟ ಲೋಪ ಇವೆ. ಮುಂಜಾಗ್ರತಾ ಕ್ರಮ ಏನೇನು ಆಗಬೇಕೋ ಅದನ್ನು ನಮ್ಮ ಸರ್ಕಾರ ತೆಗೆದುಕೊಳ್ಳುತ್ತದೆ ಎಂದರು.

ಭಾಗ್ಯಲಕ್ಷ್ಮೀ ಬಾಂಡ್ ಸ್ಥಗಿತಗೊಂಡಿಲ್ಲ
ಭಾಗ್ಯಲಕ್ಷ್ಮಿ ಬಾಂಡ್ ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

3 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

3 hours ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

3 hours ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

11 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

14 hours ago