ರಾಜ್ಯ

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

2011ರಿಂದ ಈವರೆಗೆ ಸುಮಾರು 16 ವರ್ಷಗಳ ಅವಧಿಯಲ್ಲಿ 3,200ಕ್ಕೂ ಹೆಚ್ಚು ಕಳ್ಳಬೇಟೆ ಪ್ರಕರಣಗಳು ನಡೆದಿರುವ ಮಾಹಿತಿಯನ್ನು ಅರಣ್ಯ ಇಲಾಖೆ ಸಂಗ್ರಹಿಸಿದೆ. ಇದು ಕಾಡು ಹಾಗೂ ವನ್ಯಜೀವಿಗಳ ರಕ್ಷಣೆಗೆ ಸವಾಲಿನ ಸನ್ನಿವೇಶವಾಗಿದೆ ಎಂದು ಇಲಾಖೆ ಪರಿಗಣಿಸಿದೆ.

ಹನೂರು ಹಾಗೂ ಸುತ್ತಮುತ್ತಲಿನ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಕಳ್ಳಬೇಟೆ ನಡೆಸುವ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದ್ದು, ವಿವಿಧ ಪ್ರಾಣಿಗಳ ಮಾಂಸವನ್ನು ಬೇಡಿಕೆಯಂತೆ ಪೂರೈಸುವ ವ್ಯವಸ್ಥೆಯನ್ನು ಈ ಗುಂಪು ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಕರೆ ಮಾಡಿ ಬೇಕಾದ ಮಾಂಸವನ್ನು ಪಡೆದುಕೊಳ್ಳುವ ವ್ಯವಸ್ಥೆ ನಿರಂತರವಾಗಿ ನಡೆಯುತ್ತಿದೆ ಎನ್ನಲಾಗಿದೆ.

ಕಳ್ಳಬೇಟೆಗಾರರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾದಾಗ ಪ್ರತಿಭಟನೆ ಹಾಗೂ ಮಾನವ ಹಕ್ಕುಗಳ ನೆಪದಲ್ಲಿ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಕೆಲ ಅರಣ್ಯ ಇಲಾಖೆ ಅಧಿಕಾರಿಗಳು ಕಳ್ಳಬೇಟೆಗಾರರಿಗೆ ಸಹಕರಿಸುತ್ತಿದ್ದಾರೆ ಎಂಬ ಆರೋಪವೂ ಇದೆ.

ಈ ಹಿನ್ನೆಲೆಯಲ್ಲಿ ಕಳ್ಳಬೇಟೆಗೆ ಕಡಿವಾಣ ಹಾಕಲು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಮುಂದಾಗಿದ್ದಾರೆ. ಈಗಾಗಲೇ 3,000ಕ್ಕೂ ಹೆಚ್ಚು ಕಳ್ಳಬೇಟೆ ಪ್ರಕರಣಗಳ ಮಾಹಿತಿಯನ್ನು ಸಂಗ್ರಹಿಸಿರುವ ಅರಣ್ಯ ಇಲಾಖೆ, ಕಳ್ಳಬೇಟೆಗಾರರ ವಿರುದ್ಧ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುತ್ತಿದೆ.

ಇನ್ನೊಂದೆಡೆ, ಆಲೂರು ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಮ್ಯಾಜಿಸ್ಟ್ರೇಟ್‌ ತನಿಖೆಯ ವರದಿ ಇನ್ನೆರಡು ದಿನಗಳಲ್ಲಿ ಸರ್ಕಾರದ ಕೈ ಸೇರುವ ಸಾಧ್ಯತೆ ಇದೆ. ಇದೇ ವೇಳೆ ರಾಜ್ಯ ಮಾನವ ಹಕ್ಕುಗಳ ಆಯೋಗವೂ ಪ್ರಕರಣದ ಕುರಿತು ತನಿಖೆ ಆರಂಭಿಸಿದೆ.

ಆಂದೋಲನ ಡೆಸ್ಕ್

Recent Posts

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

50 mins ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

58 mins ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

8 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

8 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

8 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

8 hours ago