Mysore
32
scattered clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಬಾಕಿ ಹಣ ಬಿಡುಗಡೆ ಮಾಡಿದ ಸರ್ಕಾರ: ಪಡಿತರ ಲಾರಿ ಮಾಲೀಕರ ಮುಷ್ಕರಕ್ಕೆ ಬ್ರೇಕ್

Government releases outstanding money Ration truck owners' strike put a stop to strike

ಬೆಂಗಳೂರು: ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನ ಪಡಿತರ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಿಡುಗಡೆ ಮಾಡಿದ ಪರಿಣಾಮ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ ಹಿಂಪಡೆದಿದ್ದಾರೆ.

ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ 260 ಕೋಟಿ ರೂ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾಲಕರು ಹಾಗೂ ಮಾಲೀಕರು ಮುಷ್ಕರ ನಡೆಸುತ್ತಿದ್ದರು. ಪ್ರತಿಭಟನೆಯಿಂದ ಎಚ್ಚೆತ್ತ ರಾಜ್ಯ ಸರ್ಕಾರ 4 ತಿಂಗಳ ಬಾಕಿ ಹಣ ಬಿಡುಗಡೆ ಮಾಡಿದೆ.

ಮುಷ್ಕರ ಕುರಿತು ಮಾತನಾಡಿದ್ದ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಅವರು, ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಕಳೆದ 5 ತಿಂಗಳಿನಿಂದ 260 ಕೋಟಿ ರೂ ಬಿಡುಗಡೆ ಮಾಡಬೇಕು. ಜೂ.19ರಂದು 100 ಕೋಟಿ ರೂ ಹಾಕುವುದಾಗಿ ಹೇಳಿದ್ದರು. ಈವರೆಗೂ 1 ರೂ ಹಣವನ್ನೂ ನೀಡಿಲ್ಲ. ಆಹಾರ ಸಚಿವರು ಹಾಗೂ ಅಧಿಕಾರಿಗಳು ಮಾತುಕತೆಗೂ ಕರೆದಿಲ್ಲ. ಹಾಗಾಗಿ ಇಂದಿನಿಂದ ಮುಷ್ಕರ ಮಾಡುತ್ತಿದ್ದೇವೆ. ಖಾತೆಗೆ ಹಣ ಬಂದ ಮೇಲೆ ಅಕ್ಕಿ ಸರಬರಾಜು ಮಾಡುತ್ತೇವೆ ಎಂದು ಹೇಳಿದ್ದರು.

ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಇದೀಗ ನಾಲ್ಕು ತಿಂಗಳಿನ ಬಾಕಿ ಉಳಿಸಿಕೊಂಡಿದ್ದ 244 ಕೋಟಿ ಬಿಡುಗಡೆ ಮಾಡಿದ್ದು, ಪಡಿತರ ಅಕ್ಕಿ ಸಾಗಣೆ ಎಂದಿನಂತೆ ನಡೆಯಲಿ ಎಂದು ಹೇಳಿದೆ.

Tags:
error: Content is protected !!