Government releases outstanding money Ration truck owners' strike put a stop to strike
ಬೆಂಗಳೂರು: ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನ ಪಡಿತರ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಿಡುಗಡೆ ಮಾಡಿದ ಪರಿಣಾಮ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ ಹಿಂಪಡೆದಿದ್ದಾರೆ.
ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ 260 ಕೋಟಿ ರೂ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾಲಕರು ಹಾಗೂ ಮಾಲೀಕರು ಮುಷ್ಕರ ನಡೆಸುತ್ತಿದ್ದರು. ಪ್ರತಿಭಟನೆಯಿಂದ ಎಚ್ಚೆತ್ತ ರಾಜ್ಯ ಸರ್ಕಾರ 4 ತಿಂಗಳ ಬಾಕಿ ಹಣ ಬಿಡುಗಡೆ ಮಾಡಿದೆ.
ಮುಷ್ಕರ ಕುರಿತು ಮಾತನಾಡಿದ್ದ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಅವರು, ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಕಳೆದ 5 ತಿಂಗಳಿನಿಂದ 260 ಕೋಟಿ ರೂ ಬಿಡುಗಡೆ ಮಾಡಬೇಕು. ಜೂ.19ರಂದು 100 ಕೋಟಿ ರೂ ಹಾಕುವುದಾಗಿ ಹೇಳಿದ್ದರು. ಈವರೆಗೂ 1 ರೂ ಹಣವನ್ನೂ ನೀಡಿಲ್ಲ. ಆಹಾರ ಸಚಿವರು ಹಾಗೂ ಅಧಿಕಾರಿಗಳು ಮಾತುಕತೆಗೂ ಕರೆದಿಲ್ಲ. ಹಾಗಾಗಿ ಇಂದಿನಿಂದ ಮುಷ್ಕರ ಮಾಡುತ್ತಿದ್ದೇವೆ. ಖಾತೆಗೆ ಹಣ ಬಂದ ಮೇಲೆ ಅಕ್ಕಿ ಸರಬರಾಜು ಮಾಡುತ್ತೇವೆ ಎಂದು ಹೇಳಿದ್ದರು.
ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಇದೀಗ ನಾಲ್ಕು ತಿಂಗಳಿನ ಬಾಕಿ ಉಳಿಸಿಕೊಂಡಿದ್ದ 244 ಕೋಟಿ ಬಿಡುಗಡೆ ಮಾಡಿದ್ದು, ಪಡಿತರ ಅಕ್ಕಿ ಸಾಗಣೆ ಎಂದಿನಂತೆ ನಡೆಯಲಿ ಎಂದು ಹೇಳಿದೆ.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…