Government releases outstanding money Ration truck owners' strike put a stop to strike
ಬೆಂಗಳೂರು: ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನ ಪಡಿತರ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಿಡುಗಡೆ ಮಾಡಿದ ಪರಿಣಾಮ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ ಹಿಂಪಡೆದಿದ್ದಾರೆ.
ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ 260 ಕೋಟಿ ರೂ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾಲಕರು ಹಾಗೂ ಮಾಲೀಕರು ಮುಷ್ಕರ ನಡೆಸುತ್ತಿದ್ದರು. ಪ್ರತಿಭಟನೆಯಿಂದ ಎಚ್ಚೆತ್ತ ರಾಜ್ಯ ಸರ್ಕಾರ 4 ತಿಂಗಳ ಬಾಕಿ ಹಣ ಬಿಡುಗಡೆ ಮಾಡಿದೆ.
ಮುಷ್ಕರ ಕುರಿತು ಮಾತನಾಡಿದ್ದ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಅವರು, ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಕಳೆದ 5 ತಿಂಗಳಿನಿಂದ 260 ಕೋಟಿ ರೂ ಬಿಡುಗಡೆ ಮಾಡಬೇಕು. ಜೂ.19ರಂದು 100 ಕೋಟಿ ರೂ ಹಾಕುವುದಾಗಿ ಹೇಳಿದ್ದರು. ಈವರೆಗೂ 1 ರೂ ಹಣವನ್ನೂ ನೀಡಿಲ್ಲ. ಆಹಾರ ಸಚಿವರು ಹಾಗೂ ಅಧಿಕಾರಿಗಳು ಮಾತುಕತೆಗೂ ಕರೆದಿಲ್ಲ. ಹಾಗಾಗಿ ಇಂದಿನಿಂದ ಮುಷ್ಕರ ಮಾಡುತ್ತಿದ್ದೇವೆ. ಖಾತೆಗೆ ಹಣ ಬಂದ ಮೇಲೆ ಅಕ್ಕಿ ಸರಬರಾಜು ಮಾಡುತ್ತೇವೆ ಎಂದು ಹೇಳಿದ್ದರು.
ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಇದೀಗ ನಾಲ್ಕು ತಿಂಗಳಿನ ಬಾಕಿ ಉಳಿಸಿಕೊಂಡಿದ್ದ 244 ಕೋಟಿ ಬಿಡುಗಡೆ ಮಾಡಿದ್ದು, ಪಡಿತರ ಅಕ್ಕಿ ಸಾಗಣೆ ಎಂದಿನಂತೆ ನಡೆಯಲಿ ಎಂದು ಹೇಳಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…