Government restricts foreign travel of government officials
ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶಸಿದೆ.
ಇದೇ ವೇಳೆ, 2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸ್ಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ.
ಇದನ್ನು ಓದಿ : ಸಿನಿಪ್ರಿಯರಿಗೆ ಶಾಕ್: ಸಿನಿಮಾ ಟಿಕೆಟ್ ದರ 200ರೂ ನಿಗದಿಗೆ ಹೈಕೋರ್ಟ್ ತಡೆಯಾಜ್ಞೆ
ಹಲವು ಅಧಿಕಾರಿಗಳು ಕೈಗೊಂಡಿರುವ ಅಧಿಕೃತ ವಿದೇಶ ಪ್ರವಾಸದ ವರದಿಗಳನ್ನು ಸಲ್ಲಿಸದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಅಧಿಕೃತ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಪ್ರಸ್ತಾವನೆಯನ್ನು ಸಲ್ಲಿಸುವ ಮುನ್ನ ಕಡ್ಡಾಯವಾಗಿ ಈ ಹಿಂದೆ ಕೈಗೊಂಡಿರುವ ಪ್ರವಾಸಗಳ ಕಲಿಕೆ ಹಾಗೂ ಅನುಷ್ಠಾನ ವರದಿ ನೀಡಿದ್ದಲ್ಲಿ ಮಾತ್ರ ಹಾಲಿ ಪ್ರವಾಸದ ಪ್ರಸ್ತಾವನೆಗೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುತ್ತಿದೆ.
ಈ ವರ್ಷ 2025ನೇ ಸಾಲಿನ ಅಂತ್ಯದವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕೃತ ವಿದೇಶ ಪ್ರವಾಸಗಳನ್ನು ನಿರ್ಭಂಧಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಂತೇಶ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…