ರಾಜ್ಯ

ಸರ್ಕಾರಿ ಶಾಲೆ ದುಸ್ಥಿತಿ | ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ್‌ ; ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಹನೂರು : ತಾಲೂಕಿನ ಕೂಡ್ಲೂರು ಕ್ಲಸ್ಟರ್ ಅಂಚಿಪಾಳ್ಯ ಶಾಲೆಯ ದುಸ್ಥಿತಿಯ ಬಗ್ಗೆ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಇದೆಂತ ಪರಿಸ್ಥಿತಿ ಬಂತು ನಮ್ಮ ರಾಜ್ಯಕ್ಕೆ! ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರಲ್ಲಿ ಮನುಷ್ಯತ್ವ ಎನ್ನುವುದೇ ಇಲ್ಲವಾಗಿದೆ ಸರ್ಕಾರಿ ಶಾಲೆಗಳು ಯಾವ ರೀತಿಯಲ್ಲಿ ಅದೋಗತಿಯಲ್ಲಿದೆ ಎನ್ನುವುದು ಅರಿವಾಗುತ್ತಿದೆ.

ಇದನ್ನೂ ಓದಿ: ಕಲಿಯುಗ ಕೃಷ್ಣನ ‘ಮಿಡಲ್ ಕ್ಲಾಸ್ ರಾಮಾಯಣ’; ಟ್ರೇಲರ್ ಬಿಡುಗಡೆ

ಮುಖ್ಯಮಂತ್ರಿಗಳೇ ಈ ವಿಚಾರವಾಗಿ ಸಂಬಂಧಿತ ಶಾಲೆಯ ಶಿಕ್ಷಕರ ಮುಖ್ಯ ಶಿಕ್ಷಕರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಬಿಟ್ಟು ನೇರವಾಗಿ ಶಿಕ್ಷಣ ಸಚಿವರ ವಿರುದ್ಧವೇ ಕ್ರಮ ಕೈಗೊಳ್ಳಿ. ಸರ್ಕಾರಿ ಶಾಲೆಗಳ ದುಸ್ಥಿತಿಗೆ ಮಧು ಬಂಗಾರಪ್ಪ ಅವರ ರಾಜೀನಾಮೆಯೊಂದೆ ಪರಿಹಾರ.

ಕಾಂಗ್ರೆಸ್ ವಿಫಲ ಕರ್ನಾಟಕ
ಸರ್ಕಾರಿ ಶಾಲೆಗಳ ಅವ್ಯವಸ್ಥೆಯಿಂದ ಮಕ್ಕಳು ಪರದಾಡುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಶಿಕ್ಷಣ ಸಚಿವ ಮಧು ಬಂಗಾರಪ್ಪನವರೆ ಕಣ್ತೆರೆಯಿರಿ ಎಂದು ಮಕ್ಕಳು ಮೂಲಭೂತ ಸೌಲಭ್ಯ ಕಲ್ಪಿಸಿಕೊಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಇನ್ನು ಈ ಪೋಸ್ಟ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಲವೊಬ್ಬರು ಕಾಮೆಂಟ್‌ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವರು, ಕಾಂಗ್ರೆಸ್ ಹಾಗೂ ಬಿಜೆಪಿ ಬಿಜೆಪಿ ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago