ರಾಜ್ಯ

ಸರ್ಕಾರಿ ಶಾಲೆ-ಕಾಲೇಜು : ದಾಖಲಾತಿ ಹೆಚ್ಚಿಸಿದರೆ ವಿದೇಶ ಪ್ರವಾಸ ಭಾಗ್ಯ!

ಬೆಂಗಳೂರು : ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಳ ಮಾಡುವ ಮುಖ್ಯಸ್ಥರು ಹಾಗೂ ಅಧಿಕಾರಿಗಳಿಗೆ ವಿದೇಶ ಪ್ರವಾಸದ ಭಾಗ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ.

ರಾಜ್ಯದ ಇತಿಹಾಸದಲ್ಲೇ ಇದೊಂದು ವಿನೂತನ ಯೋಜನೆಯಾಗಿದ್ದು, ಇದರ ಪ್ರಕಾರ ೨೦೨೬ -೨೭ನೇ ಶೈಕ್ಷಣಿಕ ವರ್ಷದಲ್ಲಿ ಯಾವ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಶಿಕ್ಷಕರು ಹಾಗೂ ಅಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ದಾಖಲಾತಿ ಮಾಡುತ್ತಾರೋ ಅವರಿಗೆ ವಿದೇಶ ಪ್ರವಾಸ ಕೈಗೊಳ್ಳುವ ಅದೃಷ್ಟ ಒದಗಿ ಬರಲಿದೆ.

ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿಯುತ್ತಿರಯವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿಕ್ಷಕರು ಮತ್ತು ಅಧಿಕಾರಿಗಳಿಗೆ ಪ್ರೋತ್ಸಾಹಕ ಯೋಜನೆಯನ್ನು ಪರಿಚಯಿಸಿದೆ.

ಇದರ ಪ್ರಕಾರ ೨೦೨೫- ೨೬ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ ವಿದ್ಯಾರ್ಥಿ ಪ್ರಮಾಣಕ್ಕಿಂತ ೨೦೨೬ -೨೭ನೇ ವರ್ಷದಲ್ಲಿ ಶೇ.೧೫ ರಿಂದ ೨೫ರಷ್ಟು ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸಬೇಕು. ಅಂತಹ ಶಾಲೆಗಳನ್ನು ಗುರುತಿಸಿ ವಿದೇಶ ಅಧ್ಯಯನಕ್ಕೆ ಕಳುಹಿಸಲಾಗುತ್ತದೆ.

ಇದನ್ನೂ ಓದಿ:-ಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ : ಕಟ್ಟುನಿಟ್ಟಿನ ಜಾರಿಗೆ ʼಹೈʼ ನಿರ್ದೇಶನ

ಕರ್ನಾಟಕ ಸಾರ್ವಜನಿಕ ಶಾಲೆಗಳು ಮತ್ತು ಪಿಎಂ ಶ್ರೀ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ೨೦೨೫-೨೬ ಕ್ಕೆ ಹೋಲಿಸಿದರೆ ೨೦೨೬-೨೭ ರಲ್ಲಿ ಕನಿಷ್ಠ ೧೫ರಷ್ಟು ದಾಖಲಾತಿಯನ್ನು ಹೆಚ್ಚಿಸಬೇಕು.

ಈ ಯೋಜನೆಯಡಿಯಲ್ಲಿ, ಜಾಗತಿಕ ಅತ್ಯುತ್ತಮ ಅಭ್ಯಾಸಗಳನ್ನು ಅಧ್ಯಯನ ಮಾಡಲು ಅಂತರರಾಷ್ಟ್ರೀಯ ಪ್ರದರ್ಶನ ಭೇಟಿಗಾಗಿ ಐವರು ಉಪ ನಿರ್ದೇಶಕರು (ಆಡಳಿತ), ಐವರು ಕ್ಷೇತ್ರ ಶಿಕ್ಷಣ ಅಧಿಕಾರಿಗಳು, ಐವರು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು, ಐದು ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಪದವಿ ಐದು ಪೂರ್ವ-ವಿಶ್ವವಿದ್ಯಾನಿಲಯದ ಪ್ರಾಂಶುಪಾಲರನ್ನು ಆಯ್ಕೆ ಮಾಡಲಾಗುತ್ತದೆ.

ಆದಾಗ್ಯೂ, ಇಲಾಖೆ ಯಾವ ದೇಶದ ಅಧ್ಯಯನಕ್ಕೆ ಕರೆದುಕೊಂಡು ಹೋಗುತ್ತದೆ ಎಂಬುದನ್ನು ತಿಳಿಸಿಲ್ಲ. ಜಾಗೃತಿ ಅಭಿಯಾನವು ನವೆಂಬರ್ ೧೪ ರಂದು ಪ್ರಾರಂಭವಾಯಿತು ಮತ್ತು ಜೂನ್ ೨೦೨೬ ರವರೆಗೆ ಮುಂದುವರಿಯುತ್ತದೆ

ಫೆಬ್ರವರಿ ಮತ್ತು ಮಾರ್ಚ್ ೨೦೨೬ ರ ನಡುವೆ, ಪ್ರವೇಶಕ್ಕೆ ಅರ್ಹರಾಗಿರುವ ಮಕ್ಕಳು, ಶಾಲೆ ಬಿಟ್ಟಿರುವ ಮಕ್ಕಳು ಮತ್ತು ನಿರಂತರವಾಗಿ ಗೈರುಹಾಜರಾಗಿರುವ ಮಕ್ಕಳನ್ನು ಗುರುತಿಸಲು ಅಽಕಾರಿಗಳು ಸಮೀಕ್ಷೆ ನಡೆಸಬೇಕು. ಗುರುತಿಸಲಾದ ಮಕ್ಕಳನ್ನು ನಂತರ ಹತ್ತಿರದ ಶಾಲೆಗಳು ಅಥವಾ ಕಾಲೇಜುಗಳಿಗೆ ವ್ಯಾಪ್ ಮಾಡಲಾಗುತ್ತದೆ. ಏಪ್ರಿಲ್ ೨೦೨೬ ರಲ್ಲಿ, ಶಾಲೆಗಳು ದಾಖಲಾತಿ ರ‍್ಯಾಲಿಯನ್ನು ಆಯೋಜಿಸಬೇಕು ಮತ್ತು ಶಿಕ್ಷಣದ ಮಹತ್ವವನ್ನು ಒತ್ತಿಹೇಳುವ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವಿವರಿಸುವ ಕರಪತ್ರಗಳನ್ನು ವಿತರಿಸಬೇಕಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago