ದಾವಣಗೆರೆ: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಏಪ್ರಿಲ್ನಲ್ಲಿ ಸರ್ಕಾರ ಬೀಳೋದು ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾಲಿಟಿಕ್ಸ್ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ಸರ್ಕಾರ ಏಪ್ರಿಲ್ನಲ್ಲಿ ಬಿದ್ದು ಹೋಗಲಿದೆ ಎಂದು ಭವಿಷ್ಯ ನುಡಿದರು.
ಗ್ಯಾರಂಟಿ ಯೋಜನೆ ಹೆಸರೇಳಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈಗ ಎಲ್ಲದಕ್ಕೂ ಹಣ ಹೊಂದಿಸಲು ಆಗದೇ ಪರದಾಡುತ್ತಿದೆ. ಶಾಸಕರು ಖರ್ಚಿಗಾಗಿ ಹಾದಿ-ಬೀದಿಯಲ್ಲಿ ಕಿತ್ತಾಡುತ್ತಿದ್ದಾರೆ. ಈ ಮಧ್ಯೆ ಪ್ರತ್ಯೇಕವಾಗಿ ಅವರವರ ಬಣದ ಡಿನ್ನರ್ ಪಾರ್ಟಿ ಮಾಡಿಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಾರಕಿಹೊಳಿ ನಮ್ಮ ಊಟ ನಮ್ಮ ಮೀಟಿಂಗ್ ಎಂದು ಹೇಳಿದ್ದಾರೆ. ಇತ್ತ ಪರಮೇಶ್ವರ್, ರಾಜಣ್ಣ, ಸತೀಶ್ ಜಾರಕಿಹೊಳಿ ಅವರು ತಮ್ಮ ಸರ್ಕಾರದ ವಿರುದ್ಧವೇ ಗುಡುಗಿದ್ದಾರೆ. ಅಲ್ಲದೇ ಇದು ದಲಿತ ವಿರೋಧಿ ಸರ್ಕಾರ ಎಂದಿದ್ದಾರೆ. ಸೋಮವಾರ ನಡೆಯುವ ಶಾಸಕಾಂಗ ಸಭೆಯ ನಂತರ ಕಾಂಗ್ರೆಸ್ ಬಣ್ಣ ಬಯಲಾಗಲಿದೆ ಎಂದು ಭವಿಷ್ಯ ನುಡಿದರು.
ಇನ್ನು ನಮ್ಮ ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ. ರಾಜ್ಯಾಧ್ಯಕ್ಷರಿಗೆ ಮಾಜಿ ಸಚಿವರು, ಮಾಜಿ ಶಾಸಕರು ಎಲ್ಲಾ ಹಂತದಲ್ಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷ ಸಂಘಟನೆಗಾಗಿ ಸಭೆ ಕರೆದಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…