ದಾವಣಗೆರೆ: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಏಪ್ರಿಲ್ನಲ್ಲಿ ಸರ್ಕಾರ ಬೀಳೋದು ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾಲಿಟಿಕ್ಸ್ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ಸರ್ಕಾರ ಏಪ್ರಿಲ್ನಲ್ಲಿ ಬಿದ್ದು ಹೋಗಲಿದೆ ಎಂದು ಭವಿಷ್ಯ ನುಡಿದರು.
ಗ್ಯಾರಂಟಿ ಯೋಜನೆ ಹೆಸರೇಳಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈಗ ಎಲ್ಲದಕ್ಕೂ ಹಣ ಹೊಂದಿಸಲು ಆಗದೇ ಪರದಾಡುತ್ತಿದೆ. ಶಾಸಕರು ಖರ್ಚಿಗಾಗಿ ಹಾದಿ-ಬೀದಿಯಲ್ಲಿ ಕಿತ್ತಾಡುತ್ತಿದ್ದಾರೆ. ಈ ಮಧ್ಯೆ ಪ್ರತ್ಯೇಕವಾಗಿ ಅವರವರ ಬಣದ ಡಿನ್ನರ್ ಪಾರ್ಟಿ ಮಾಡಿಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಾರಕಿಹೊಳಿ ನಮ್ಮ ಊಟ ನಮ್ಮ ಮೀಟಿಂಗ್ ಎಂದು ಹೇಳಿದ್ದಾರೆ. ಇತ್ತ ಪರಮೇಶ್ವರ್, ರಾಜಣ್ಣ, ಸತೀಶ್ ಜಾರಕಿಹೊಳಿ ಅವರು ತಮ್ಮ ಸರ್ಕಾರದ ವಿರುದ್ಧವೇ ಗುಡುಗಿದ್ದಾರೆ. ಅಲ್ಲದೇ ಇದು ದಲಿತ ವಿರೋಧಿ ಸರ್ಕಾರ ಎಂದಿದ್ದಾರೆ. ಸೋಮವಾರ ನಡೆಯುವ ಶಾಸಕಾಂಗ ಸಭೆಯ ನಂತರ ಕಾಂಗ್ರೆಸ್ ಬಣ್ಣ ಬಯಲಾಗಲಿದೆ ಎಂದು ಭವಿಷ್ಯ ನುಡಿದರು.
ಇನ್ನು ನಮ್ಮ ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ. ರಾಜ್ಯಾಧ್ಯಕ್ಷರಿಗೆ ಮಾಜಿ ಸಚಿವರು, ಮಾಜಿ ಶಾಸಕರು ಎಲ್ಲಾ ಹಂತದಲ್ಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷ ಸಂಘಟನೆಗಾಗಿ ಸಭೆ ಕರೆದಿದ್ದಾರೆ ಎಂದು ಮಾಹಿತಿ ನೀಡಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…