ದಾವಣಗೆರೆ: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಏಪ್ರಿಲ್ನಲ್ಲಿ ಸರ್ಕಾರ ಬೀಳೋದು ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾಲಿಟಿಕ್ಸ್ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ಸರ್ಕಾರ ಏಪ್ರಿಲ್ನಲ್ಲಿ ಬಿದ್ದು ಹೋಗಲಿದೆ ಎಂದು ಭವಿಷ್ಯ ನುಡಿದರು.
ಗ್ಯಾರಂಟಿ ಯೋಜನೆ ಹೆಸರೇಳಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈಗ ಎಲ್ಲದಕ್ಕೂ ಹಣ ಹೊಂದಿಸಲು ಆಗದೇ ಪರದಾಡುತ್ತಿದೆ. ಶಾಸಕರು ಖರ್ಚಿಗಾಗಿ ಹಾದಿ-ಬೀದಿಯಲ್ಲಿ ಕಿತ್ತಾಡುತ್ತಿದ್ದಾರೆ. ಈ ಮಧ್ಯೆ ಪ್ರತ್ಯೇಕವಾಗಿ ಅವರವರ ಬಣದ ಡಿನ್ನರ್ ಪಾರ್ಟಿ ಮಾಡಿಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಾರಕಿಹೊಳಿ ನಮ್ಮ ಊಟ ನಮ್ಮ ಮೀಟಿಂಗ್ ಎಂದು ಹೇಳಿದ್ದಾರೆ. ಇತ್ತ ಪರಮೇಶ್ವರ್, ರಾಜಣ್ಣ, ಸತೀಶ್ ಜಾರಕಿಹೊಳಿ ಅವರು ತಮ್ಮ ಸರ್ಕಾರದ ವಿರುದ್ಧವೇ ಗುಡುಗಿದ್ದಾರೆ. ಅಲ್ಲದೇ ಇದು ದಲಿತ ವಿರೋಧಿ ಸರ್ಕಾರ ಎಂದಿದ್ದಾರೆ. ಸೋಮವಾರ ನಡೆಯುವ ಶಾಸಕಾಂಗ ಸಭೆಯ ನಂತರ ಕಾಂಗ್ರೆಸ್ ಬಣ್ಣ ಬಯಲಾಗಲಿದೆ ಎಂದು ಭವಿಷ್ಯ ನುಡಿದರು.
ಇನ್ನು ನಮ್ಮ ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ. ರಾಜ್ಯಾಧ್ಯಕ್ಷರಿಗೆ ಮಾಜಿ ಸಚಿವರು, ಮಾಜಿ ಶಾಸಕರು ಎಲ್ಲಾ ಹಂತದಲ್ಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷ ಸಂಘಟನೆಗಾಗಿ ಸಭೆ ಕರೆದಿದ್ದಾರೆ ಎಂದು ಮಾಹಿತಿ ನೀಡಿದರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…