ಮಂಗಳೂರು : ಕಾಂಗ್ರೆಸ್ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ತಂಡ, ಡಿಸಿಎಂ ಡಿಕೆ ಶಿವಕುಮಾರ್ ತಂಡ ಮತ್ತು ಸಚಿವ ಸತೀಶ್ ಜಾರಕಿಹೊಳಿ ತಂಡ ಕೆಲಸ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್ ನಡೆದಿದೆ ಎಂದು ಹೇಳಿದ್ದಾರೆ.
ಮುಂದೆಯೂ ರೆಸಾರ್ಟ್ ರಾಜಕಾರಣ ಪ್ರಾರಂಭವಾಗುತ್ತದೆ. ಹಾಗಾಗಿ ಕಾಂಗ್ರೆಸ್ನ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ಗಳನ್ನು ಹಾಕಲಾಗುತ್ತಿದೆ. ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗುತ್ತಿದೆ. ಜನಪ್ರತಿನಿಧಿಗಳ ಮೇಲೂ ಕೇಸ್ ಹಾಕಿ ಅವರ ಹಕ್ಕು ಕಸಿಯಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ ಕೇಸ್ ಹಾಕಲಾಗಿದೆ. ಸರ್ಕಾರ ಪೊಲೀಸ್ ಇಲಾಖೆ ಬಳಸಿಕೊಂಡು ಎಫ್ಐಆರ್ ದಾಖಲಿಸಿದೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಬರೆದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ತಿಂಗಳ ಒಳಗೆ ಎರಡನೇ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್ಗಳು ಜಾಸ್ತಿಯಾಗುತ್ತಿವೆ. ಆದರೆ ದೇಶ ವಿರೋಧಿಗಳ ಮೇಲೆ ಒಂದೇ ಒಂದು ಕೇಸ್ ಹಾಕಿಲ್ಲ ಎಂದು ಕಿಡಿಕಾರಿದ್ದಾರೆ.
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…