ರಾಜ್ಯ

ಬೆಂಗಳೂರು ಮಳೆ ಅವಾಂತರಕ್ಕೆ ಬೇಜವಬ್ದಾರಿತನ ಕಾರಣ : ಆರ್. ಅಶೋಕ್ ಆಕ್ರೋಶ

  • ಪರಿಹಾರ ಕಾರ್ಯಕ್ಕೆ ಒಂದು ಸಾವಿರ ಕೋಟಿ ಬಿಡುಗಡೆಗೆ ಆಗ್ರಹ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಧ್ಯ ರಾತ್ರಿಯಿಂದಲೇ ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ ಕರೆಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಬಡಾವಣೆಗಳು ಜಲಾವೃತವಾಗಿವೆ, ನೂರಾರು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿವೆ, ಅನಾಥಾಶ್ರಮಕ್ಕೂ ನೀರು ನುಗ್ಗಿದೆ, ಇಡೀ ರಾತ್ರಿ ಜನರು ಜಾಗರಣೆ ಮಾಡುತ್ತಿದ್ದಾರೆ, ಅವರಿಗೆ ಊಟದ ವ್ಯವಸ್ಥೆ ಇಲ್ಲ, ಇಷ್ಟಾದರೂ ಬಿಬಿಎಂಪಿ ನೆರವಿಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಣೆಗೇಡಿತನದ ಪರಮಾವಧಿ:- ಕಳೆದ ಮುಳುಗಡೆಯಾಗಿದ್ದ ಸಾಯಿ ಬಡಾವಣೆ, ನಂದಗೋಕುಲ ಬಡಾವಣೆ ಸೇರಿದಂತೆ ಅನೇಕ ಬಡಾವಣೆಗಳಿಗೆ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಆದರೆ, ಅದು ಮಾತಿನಲ್ಲೇ ಉಳಿದು ಈ ಸಲ ಮತ್ತೆ ಆ ಬಡಾವಣೆಗಳು ನೀರಿನಲ್ಲಿ ಮುಳುಗಿವೆ. ಆದರೂ ನಿವಾಸಿಗಳ ಅಳಲು ಕೇಳಲು ಯಾರೂ ಮುಂದಾಗಿಲ್ಲ ಎಂದು ಟೀಕಿಸಿದ್ದಾರೆ.

ಮೂರು ವ್ಯಾಲಿಗಳಲ್ಲೂ ಪ್ರವಾಹ:- ಹೆಬ್ಬಾಳ, ಕೋರಮಂಗಲ ಮತ್ತು ವೃಷುಭಾವತಿ ವ್ಯಾಲಿಯಲ್ಲಿ ಪ್ರವಾಹ ಬಂದಿದೆ. ಇನ್ನೂ ಮೂರು – ನಾಲ್ಕು ದಿನ ಭಾರಿ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಕ್ಷಣ ತುರ್ತು ಪರಿಹಾರ ಕಾರ್ಯಪಡೆ ರಚಿಸಿ, ಸಹಾಯವಾಣಿ ಆರಂಭಿಸಬೇಕು.

ನೀರು ನುಗ್ಗಿರುವ ಮನೆಗಳಿಗೆ ತಲಾ ಕನಿಷ್ಠ ಒಂದು ಲಕ್ಷ ರೂ. ಪರಿಹಾರ ವಿತರಿಸಬೇಕು. ಆ ಮನೆಯವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಿ ಎರಡು ತಿಂಗಳಿಗೆ ಆಗುವಷ್ಟು ಪರಿಹಾರ ವಿತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಅಪಮಾನ:- ಹಿಂದಿನ ವರ್ಷದ ಲೋಪಗಳಿಂದ ಪಾಠ ಕಲಿಯದ ಸರ್ಕಾರದ ಬೇಜವಾಬ್ದಾರಿತನದಿಂದ ನಗರದಲ್ಲಿ ಅನಾಹುತ ಸಂಭವಿಸಿದೆ. ಮುಂಚಿತವಾಗಿ ಮೋರಿ, ಚರಂಡಿ, ರಾಜ ಕಾಲುವೆಗಳಲ್ಲಿ ಹೂಳು ತೆಗೆಸುವ ಕೆಲಸ ಮಾಡಬೇಕಿತ್ತು. ನಗರದ ಅನೇಕ ಕಡೆ ವೈಟ್ ಟಾಫಿಂಗ್ ಮತ್ತು ರಿಪೇರಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿನ ಅವಶೇಷಗಳನ್ನು ತೆರವು ಮಾಡಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ.

ಬಿಬಿಎಂಪಿ ಮುನ್ನೆಚ್ಚರಿಕೆ ವಹಿಸದಿರುವುದೇ ಅನಾಹುತಗಳಿಗೆ ಕಾರಣ ಎಂದು ಖುದ್ದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ. ಉಸ್ತುವಾರಿ ಸಚಿವ ಡಿಕೆಶಿ ಅವರ ವೈಫಲ್ಯಕ್ಕೆ ಇದಕ್ಕಿಂತ ಇನ್ಯಾವುದೇ ಸರ್ಟಿಫಿಕೇಟ್ ಬೇಕಾ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸಿರುವ ಶಿವಕುಮಾರ್ ಅವರು, ಹಿಂದಿನ ಸರ್ಕಾರದ ಲೋಪ ಅನಾಹುತಕ್ಕೆ ಕಾರಣ ಎಂದಿದ್ದಾರೆ. ಆಗಾದರೆ ಎರಡು ವರ್ಷಗಳ ಕಾಲ ಇವರು ಕಡಿದು ಕಟ್ಟೆ ಹಾಕಿದ್ದೇನು? ಇದೇನಾ ಇವರ ಬ್ರಾಂಡ್ ಬೆಂಗಳೂರು? ಹೆಸರಿಗೆ ಮಾತ್ರ ಗ್ರೆಟರ್, ದಿನವೂ ಜನರಿಗೆ ಟಾರ್ಚರ್ ತಪ್ಪಿಲ್ಲ. ಒಂದೇ ಮಳೆಗೆ ಇವರ ಬ್ರಾಂಡ್ ಬೆಂಗಳೂರು ಕೊಚ್ಚಿ ಹೋಯ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗಿದೆ ಎಂದು ಅಶೋಕ್ ಕಿಡಿ ಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago