ರಾಜ್ಯ

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

ಅಧಿಕಾರಿಗಳ ಮನವೊಲಿಕೆಗೆ ಸಾರಿಗೆ ಸಂಘಟನೆಗಳು ಸುತಾರಾಂ ಒಪ್ಪಿಗೆ ನೀಡಿಲ್ಲ. ಮತ್ತೆ ಮೇ 25ಕ್ಕೆ ಸಭೆಗೆ ಬರುವಂತೆ ಅಧಿಕಾರಿಗಳು ಹೇಳಿದ್ದರೂ ಮುಖಂಡರು ಒಪ್ಪಿಗೆ ನೀಡಲಿಲ್ಲ. ನಾಳೆ ಮಧ್ಯಾಹ್ನದ ಒಳಗಾಗಿ ಸಭೆ ಕರೆದು ಬೇಡಿಕೆ ಈಡೇರಿಕೆ ಸಂಬಂಧ ಮಾತನಾಡುವಂತೆ ಆಗ್ರಹಿಸಿದರು. ಇದಕ್ಕೆ ಅಧಿಕಾರಿಗಳು ಸರ್ಕಾರ ಸದ್ಯದ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.

ಪಟ್ಟು ಸಡಿಲಿಸದ ಸಾರಿಗೆ ನೌಕರ ಸಂಘಟನೆ ಮುಖಂಡರು ನಾಳೆ ಮಧ್ಯರಾತ್ರಿಯಿಂದಲೇ ಬಸ್ ಸಂಚಾರ ಸ್ಥಗಿತಕ್ಕೆ ತೀರ್ಮಾನಿಸಿದ್ದಾರೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಬಸ್ ಬಂದ್‌ನಿಂದ ಸಾರ್ವಜನಿಕರಿಗೆ ಭಾರೀ ತೊಂದರೆಯಾಗುವ ಆತಂಕ ಎದುರಾಗಿದೆ. ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳತ್ತೇವೆ ಎಂದು ಪ್ರಯಾಣಿಕರಿಗೆ ಅಭಯ ನೀಡಿದ್ದಾರೆ. ಇತ್ತ ಎಸ್‌ಸಿ, ಎಸ್‌ಟಿ ನೌಕರರ ಸಂಘ ಮುಷ್ಕರದಿಂದ ಹೊರ ಬಂದಿದ್ದು, ಮುಷ್ಕರದಲ್ಲಿ ಭಾಗಿಯಾಗುವುದಿಲ್ಲ. ಇಲಾಖೆಯ ಆದೇಶದಂತೆ ನಡೆದುಕೊಳ್ತೇವೆ ಎಂದು ಹೇಳಿದೆ

 

ಬೇಡಿಕೆ ಏನು?

  • ಶೇ.25 ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಗೆ ಸರ್ಕಾರ ಕೊಟ್ಟಿದ್ದು 12.5 ಮಾತ್ರ
  • 2024ರ ಜನವರಿಯಿಂದ ಶೇ.25ರಷ್ಟು ವೇತನ ನೀಡಬೇಕು. ಬಾಕಿ ವೇತನ ಪೂರ್ಣ ಪ್ರಮಾಣದಲ್ಲಿ ಪಾವತಿಯಾಗಬೇಕು
  • 26 ತಿಂಗಳ ಬಾಕಿ ವೇತನ ಒಂದೇ ಕಂತಿನಲ್ಲಿ ಕೊಡಬೇಕು,ಭತ್ಯೆ ಹೆಚ್ಚಳ ಮಾಡಬೇಕು
  • ಕೋವಿಡ್‌ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ
  • 26 ತಿಂಗಳ ಬಾಕಿ ಹಣ 1,272 ಕೋಟಿ ರಿಲೀಸ್ ಮಾಡಬೇಕು
ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

1 hour ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

2 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

2 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

3 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

4 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

4 hours ago