ರಾಜ್ಯ

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

ಅಧಿಕಾರಿಗಳ ಮನವೊಲಿಕೆಗೆ ಸಾರಿಗೆ ಸಂಘಟನೆಗಳು ಸುತಾರಾಂ ಒಪ್ಪಿಗೆ ನೀಡಿಲ್ಲ. ಮತ್ತೆ ಮೇ 25ಕ್ಕೆ ಸಭೆಗೆ ಬರುವಂತೆ ಅಧಿಕಾರಿಗಳು ಹೇಳಿದ್ದರೂ ಮುಖಂಡರು ಒಪ್ಪಿಗೆ ನೀಡಲಿಲ್ಲ. ನಾಳೆ ಮಧ್ಯಾಹ್ನದ ಒಳಗಾಗಿ ಸಭೆ ಕರೆದು ಬೇಡಿಕೆ ಈಡೇರಿಕೆ ಸಂಬಂಧ ಮಾತನಾಡುವಂತೆ ಆಗ್ರಹಿಸಿದರು. ಇದಕ್ಕೆ ಅಧಿಕಾರಿಗಳು ಸರ್ಕಾರ ಸದ್ಯದ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.

ಪಟ್ಟು ಸಡಿಲಿಸದ ಸಾರಿಗೆ ನೌಕರ ಸಂಘಟನೆ ಮುಖಂಡರು ನಾಳೆ ಮಧ್ಯರಾತ್ರಿಯಿಂದಲೇ ಬಸ್ ಸಂಚಾರ ಸ್ಥಗಿತಕ್ಕೆ ತೀರ್ಮಾನಿಸಿದ್ದಾರೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಬಸ್ ಬಂದ್‌ನಿಂದ ಸಾರ್ವಜನಿಕರಿಗೆ ಭಾರೀ ತೊಂದರೆಯಾಗುವ ಆತಂಕ ಎದುರಾಗಿದೆ. ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳತ್ತೇವೆ ಎಂದು ಪ್ರಯಾಣಿಕರಿಗೆ ಅಭಯ ನೀಡಿದ್ದಾರೆ. ಇತ್ತ ಎಸ್‌ಸಿ, ಎಸ್‌ಟಿ ನೌಕರರ ಸಂಘ ಮುಷ್ಕರದಿಂದ ಹೊರ ಬಂದಿದ್ದು, ಮುಷ್ಕರದಲ್ಲಿ ಭಾಗಿಯಾಗುವುದಿಲ್ಲ. ಇಲಾಖೆಯ ಆದೇಶದಂತೆ ನಡೆದುಕೊಳ್ತೇವೆ ಎಂದು ಹೇಳಿದೆ

 

ಬೇಡಿಕೆ ಏನು?

  • ಶೇ.25 ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಗೆ ಸರ್ಕಾರ ಕೊಟ್ಟಿದ್ದು 12.5 ಮಾತ್ರ
  • 2024ರ ಜನವರಿಯಿಂದ ಶೇ.25ರಷ್ಟು ವೇತನ ನೀಡಬೇಕು. ಬಾಕಿ ವೇತನ ಪೂರ್ಣ ಪ್ರಮಾಣದಲ್ಲಿ ಪಾವತಿಯಾಗಬೇಕು
  • 26 ತಿಂಗಳ ಬಾಕಿ ವೇತನ ಒಂದೇ ಕಂತಿನಲ್ಲಿ ಕೊಡಬೇಕು,ಭತ್ಯೆ ಹೆಚ್ಚಳ ಮಾಡಬೇಕು
  • ಕೋವಿಡ್‌ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ
  • 26 ತಿಂಗಳ ಬಾಕಿ ಹಣ 1,272 ಕೋಟಿ ರಿಲೀಸ್ ಮಾಡಬೇಕು
ಆಂದೋಲನ ಡೆಸ್ಕ್

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

11 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago