ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಸೇರಿದೆ.
2023ರ ಜೂನ್.11ರಿಂದ ಜುಲೈ.25ರ ಅವಧಿಯಲ್ಲಿ ನಾಲ್ಕೂ ನಿಗಮದ ಸಾರಿಗೆ ಬಸ್ಗಳಲ್ಲಿ 500 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. ಈ ಕಾರಣದಿಂದಲೇ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಗೌರವ ಸಮರ್ಪಿಸುತ್ತೇವೆ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿದೆ. ನಮ್ಮ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ. ಇದಕ್ಕಾಗಿ ಎಲ್ಲಾ ಅಧಿಕಾರಿಗಳು ಹಾಗೂ ನೌಕರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…