ರಾಜ್ಯ

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ನಾಗೇಂದ್ರ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ ಎಂದು ಲೋಕಭವನದ ಅಧಿಕೃತ ಪ್ರಕಟಣೆ ತಿಳಿಸಿದೆ. ಯೋಜನೆ ಮತ್ತು ಅಂಕಿ ಸಾಂಖ್ಯಿಕ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿರುವುದನ್ನು ರಾಜ್ಯ ಸರ್ಕಾರದ ಅಧಿಕೃತ ರಾಜ್ಯಪತ್ರದ ೨೯-೦೮-೨೦೨೬ರ ಅಧಿಸೂಚನೆ ದೃಢಪಡಿಸಿದೆ. ಹೀಗಾಗಿ ನಾಗೇಂದ್ರ ಅವರು ರಾಜ್ಯ ಸಚಿವ ಸಂಪುಟದಿಂದ ಅಧಿಕೃತವಾಗಿ ಹೊರಬಂದಿದ್ದಾರೆ.

ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿ.ನಾಗೇಂದ್ರ ಅವರು ಆಗಸ್ಟ್ ೩ರಂದು ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಯೋಜನೆ ಮತ್ತು ಅಂಕಿ ಸಾಂಖ್ಯಿಕ ಖಾತೆಯನ್ನು ವಹಿಸಿಕೊಂಡಿದ್ದ ಅವರು, ಕೇವಲ ಸುಮಾರು ೨೪-೨೫ ದಿನಗಳಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಯಿತು.

ನಾಗೇಂದ್ರ ಅವರು ೨೦೨೪ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದಾಗಲೇ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಆರೋಪಗಳು ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದವು. ಆಗಲೂ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಽಸಿದಂತೆ ಕೇಂದ್ರ ತನಿಖಾ ಸಂಸ್ಥೆ ಸಿಬಿಐ ೨೦೨೬ರ ಜೂನ್‌ನಲ್ಲಿ ಸಲ್ಲಿಸಿದ ದೋಷಾರೋಪಪಟ್ಟಿಯಲ್ಲಿ ನಾಗೇಂದ್ರ ಸೇರಿದಂತೆ ೩೦ ಮಂದಿಯನ್ನು ಆರೋಪಿಗಳಾಗಿ ಹೆಸರಿಸಿದೆ. ಸಿಬಿಐ ಪ್ರಕಾರ, ವಾಲ್ಮೀಕಿ ನಿಗಮಕ್ಕೆ ಸಂಬಂಽಸಿದ ಸುಮಾರು ೮೯.೬೩ ಕೋಟಿ ರೂ.ಗಳನ್ನು ನಕಲಿ ಚೆಕ್‌ಗಳು ಮತ್ತು ಆರ್‌ಟಿಜಿಎಸ್ ವಹಿವಾಟುಗಳ ಮೂಲಕ ಅಕ್ರಮವಾಗಿ ವರ್ಗಾಯಿಸಲಾಗಿದ್ದು, ನಂತರ ಸುಮಾರು ೬೦೦ ಬ್ಯಾಂಕ್ ಖಾತೆಗಳ ಮೂಲಕ ಹಣವನ್ನು ಹಲವು ಹಂತಗಳಲ್ಲಿ ವರ್ಗಾಯಿಸಲಾಗಿದೆ ಎಂಬ ಆರೋಪವಿದೆ. ಸಿಬಿಐ ದೋಷಾರೋಪಪಟ್ಟಿಯಲ್ಲಿ ನಾಗೇಂದ್ರ ಅವರ ವಿರುದ್ಧವೂ ನಿರ್ದಿಷ್ಟ ಆರೋಪಗಳನ್ನು ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

3 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

4 hours ago

ಮೈಸೂರು ದಸರಾ ಗಜಪಡೆ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಶ್ರೀಕಂಠನಿಗೆ ಮೊದಲ ಸ್ಥಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…

4 hours ago

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

7 hours ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

7 hours ago