Governor Gehlot's
ಬೆಂಗಳೂರು : ಮೈಸೂರು ಮೂಲದ ಪತ್ರಕರ್ತ ಕೆ.ಶಿವಕುಮಾರ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ರಾಜ್ಯಪಾಲರು ಭಾನುವಾರ ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದಾರೆ.
ಕಳೆದ ಹಲವು ದಿನಗಳಿಂದ ನನಗೆ ಬಿದ್ದಿದ್ದ ನಾಲ್ವರ ಹೆಸರುಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರದ ಶಿಫಾರಸ್ಸಿಗೆ ಸಹಿ ಹಾಕಿದ್ದಾರೆ. ರಮೇಶ್ ಬಾಬು , ಶಿವಕುಮಾರ್ ,ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಭಾರತಿ ಕೃಷ್ಣ ಮತ್ತು ದಲಿತ ಮುಖಂಡ ಎಪ್.ಹೆಚ್ ಜಕ್ಕಪ್ಪನವರನ್ನು ವಿಧಾನ ಪರಿಷತ್ಗೆ ನಾಮಕರಣ ಮಾಡಲಾಗಿದೆ.
ಮೂವರು 6 ವರ್ಷಗಳ ಅವಧಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆದರೆ ರಮೇಶ್ ಬಾಬು ಅವರ ಅಧಿಕಾರ ಅವಧಿ 2026ರ ಜುಲೈ 21ರ ವರೆಗೆ ಮಾತ್ರ ಇರಲಿದೆ.
ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಕಾಂಗ್ರೆಸ್ ಯು.ಬಿ. ವೆಂಕಟೇಶ್ ಮತ್ತು ಪ್ರಕಾಶ್ ಕೆ. ರಾಥೋಡ್ ಅವರ ಅವಧಿ 2024ರ ಅಕ್ಟೋಬರ್ನಲ್ಲಿ ಮತ್ತು ಜೆಡಿಎಸ್ನ ಕೆ.ಎ ತಿಪ್ಪೇಸ್ವಾಮಿ ಅವರ ಅವಧಿ 2025ರ ಜನವರಿ ವೇಳೆಗೆ ಮುಕ್ತಾಯಗೊಂಡಿತ್ತು. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಸಿ.ಪಿ. ಯೋಗೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸ್ಥಾನಗಳು ಖಾಲಿಯಾಗಿದ್ದವು. 7 ತಿಂಗಳ ಹಗ್ಗ ಜಗ್ಗಾಟದ ಬಳಿಕ ಸರ್ಕಾರ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯಪಾಲರು ಭಾರತದ ಸಂವಿಧಾನದ 171(3)(ಇ) ವಿಧಿಯಡಿಯಲ್ಲಿ ನಾಲ್ವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಭಾನುವಾರ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.
ಜನತಾ ಪ್ರಾತಿನಿಧ್ಯ ಕಾಯ್ದೆ 1951 ರ ಸೆಕ್ಷನ್ 74 ಮತ್ತು ಸೆಕ್ಷನ್ 156(2) ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ, ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿ ನೇಮಕಾತಿಗಳನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯಪಾಲರ ಹೆಸರಿನಲ್ಲಿ ಆದೇಶವನ್ನು ಬಿಡುಗಡೆ ಮಾಡಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಮಧು ಎ. ಸಿ. ಅವರು ಸಹಿ ಮಾಡಿದ್ದಾರೆ.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…