ರಾಜ್ಯ

MLA ನಾಮ ನಿರ್ದೇಶನಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ ರಾಜ್ಯಪಾಲರು

ಬೆಂಗಳೂರು : ಮೈಸೂರು ಮೂಲದ ಪತ್ರಕರ್ತ ಕೆ.ಶಿವಕುಮಾರ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ರಾಜ್ಯಪಾಲರು ಭಾನುವಾರ ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದಾರೆ.

ಕಳೆದ ಹಲವು ದಿನಗಳಿಂದ ನನಗೆ ಬಿದ್ದಿದ್ದ ನಾಲ್ವರ ಹೆಸರುಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರದ ಶಿಫಾರಸ್ಸಿಗೆ ಸಹಿ ಹಾಕಿದ್ದಾರೆ.  ರಮೇಶ್ ಬಾಬು ‌, ಶಿವಕುಮಾರ್ ,ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಭಾರತಿ ಕೃಷ್ಣ ಮತ್ತು ದಲಿತ ಮುಖಂಡ ಎಪ್.ಹೆಚ್ ಜಕ್ಕಪ್ಪನವರನ್ನು ವಿಧಾನ ಪರಿಷತ್ಗೆ ನಾಮಕರಣ ಮಾಡಲಾಗಿದೆ.

ಮೂವರು 6 ವರ್ಷಗಳ ಅವಧಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆದರೆ ರಮೇಶ್‌ ಬಾಬು ಅವರ ಅಧಿಕಾರ ಅವಧಿ 2026ರ ಜುಲೈ 21ರ ವರೆಗೆ ಮಾತ್ರ ಇರಲಿದೆ.

ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಕಾಂಗ್ರೆಸ್‌ ಯು.ಬಿ. ವೆಂಕಟೇಶ್ ಮತ್ತು ಪ್ರಕಾಶ್ ಕೆ. ರಾಥೋಡ್ ಅವರ ಅವಧಿ 2024ರ ಅಕ್ಟೋಬರ್‌ನಲ್ಲಿ ಮತ್ತು ಜೆಡಿಎಸ್‌ನ ಕೆ.ಎ ತಿಪ್ಪೇಸ್ವಾಮಿ ಅವರ ಅವಧಿ 2025ರ ಜನವರಿ ವೇಳೆಗೆ ಮುಕ್ತಾಯಗೊಂಡಿತ್ತು. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಸಿ.ಪಿ. ಯೋಗೇಶ್ವ‌ರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸ್ಥಾನಗಳು ಖಾಲಿಯಾಗಿದ್ದವು. 7 ತಿಂಗಳ ಹಗ್ಗ ಜಗ್ಗಾಟದ ಬಳಿಕ ಸರ್ಕಾರ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯಪಾಲರು ಭಾರತದ ಸಂವಿಧಾನದ 171(3)(ಇ) ವಿಧಿಯಡಿಯಲ್ಲಿ ನಾಲ್ವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಭಾನುವಾರ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆ 1951 ರ ಸೆಕ್ಷನ್ 74 ಮತ್ತು ಸೆಕ್ಷನ್ 156(2) ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ, ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿ ನೇಮಕಾತಿಗಳನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ.

ರಾಜ್ಯಪಾಲರ ಹೆಸರಿನಲ್ಲಿ ಆದೇಶವನ್ನು ಬಿಡುಗಡೆ ಮಾಡಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಮಧು ಎ. ಸಿ. ಅವರು ಸಹಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago