ರಾಜ್ಯ

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ ಹಂಗಾಮ ಸೃಷ್ಟಿಸಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಇದೀಗ ಗಣರಾಜ್ಯೋತ್ಸವ ಭಾಷಣಕ್ಕೂ ಕ್ಯಾತೆ ತೆಗೆಯುವ ಮೂಲಕ ಮತ್ತೊಂದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದ್ದಾರೆ.

ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರ ಪುನಃ ಕೇಂದ್ರ ಸರ್ಕಾರದಿಂದ ಉಂಟಾಗಿರುವ ಅನ್ಯಾಯಗಳನ್ನು ಸೇರ್ಪಡೆ ಮಾಡಿದೆ ಎಂದು ತಿಳಿದುಬಂದಿದೆ.

ಭಾಷಣದಲ್ಲಿ ಸರ್ಕಾರದ ಇದುವರೆಗಿನ ಸಾಧನೆಗಳು, ಮುಂದಿನ ಯೋಜನೆಗಳು ಮತ್ತು ಗುರಿಗಳನ್ನು ಹೊಂದಿರುವ ಅಂಶಗಳಿರುತ್ತದೆ. ಇದನ್ನು ರಾಜ್ಯಪಾಲರ ಮೂಲಕ, ಆಯಾಯ ಸರ್ಕಾರ ಸಾರ್ವಜನಿಕರ ಮುಂದೆ ಇಡುತ್ತದೆ. ಹಾಗಾಗಿ, ಈ ಭಾಷಣವನ್ನು ಸರ್ಕಾರವೇ ಸಿದ್ದಪಡಿಸಿಕೊಡುತ್ತದೆ.

ಸಾಮಾನ್ಯವಾಗಿ ಪ್ರತಿವರ್ಷ ಜನವರಿ.26ರ ಗಣರಾಜ್ಯೋತ್ಸವದಂದು ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಸರ್ಕಾರ ಬರೆದು ಕೊಟ್ಟಿರುವ ಭಾಷಣವನ್ನು ಓದುವುದು ಈವರೆಗೂ ನಡೆದುಕೊಂಡು ಬಂದ ಸಂಪ್ರದಾಯವಾಗಿತ್ತು.

ಆದರೆ ಮೊದಲ ಬಾರಿಗೆ ಕರ್ನಾಟಕದಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗದ ನಡುವೆ ನೇರಾನೇರ ಸಂಘರ್ಷ ಏರ್ಪಟ್ಟಿದೆ. ಒಂದು ಕಡೆ ಜಂಟಿ ಅಧಿವೇಶನ ವೇಳೆ ಸರ್ಕಾರದ ಭಾಷಣವನ್ನು ಓದದೆ ಕೇವಲ ಎರಡು ಸಾಲಿನಲ್ಲಿ ಓದಿ ಹೊರ ನಡೆದ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಳ್ಳಬೇಕೆಂದು ಆಡಳಿತರೂಢ ಕಾಂಗ್ರೆಸ್ ಪಟ್ಟು ಹಿಡಿದಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…

32 mins ago

ಫ್ಲೀಸ್. . ಬಸ್ ನಿಲ್ಲಿಸಿ ಸಾರ್. . !

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…

45 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ಗಾಂಧಿ, ಬುದ್ಧ, ಬಸವ ಅರ್ಜೆಂಟಾಗಿ ಬೇಕು

ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…

56 mins ago

ಸರ್ಕಾರ, ರಾಜ್ಯಪಾಲರ ಸಂಘರ್ಷ ; ನ್ಯಾಯಾಂಗ ಮಧ್ಯಪ್ರವೇಶ ಅಗತ್ಯ

ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…

1 hour ago

ದೇಶದ ಐಕ್ಯತೆ, ಪ್ರಗತಿಯ ಸಂಕೇತ-ಸಂವಿಧಾನ

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…

1 hour ago

ದಿಲ್ಲಿ ಗಣರಾಜ್ಯೋತ್ಸವ | ಚಾ.ನಗರದ ಇಬ್ಬರು ಮಹಿಳೆಯರಿಗೆ ಆಹ್ವಾನ

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…

1 hour ago