ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ ಹಂಗಾಮ ಸೃಷ್ಟಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇದೀಗ ಗಣರಾಜ್ಯೋತ್ಸವ ಭಾಷಣಕ್ಕೂ ಕ್ಯಾತೆ ತೆಗೆಯುವ ಮೂಲಕ ಮತ್ತೊಂದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದ್ದಾರೆ.
ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರ ಪುನಃ ಕೇಂದ್ರ ಸರ್ಕಾರದಿಂದ ಉಂಟಾಗಿರುವ ಅನ್ಯಾಯಗಳನ್ನು ಸೇರ್ಪಡೆ ಮಾಡಿದೆ ಎಂದು ತಿಳಿದುಬಂದಿದೆ.
ಭಾಷಣದಲ್ಲಿ ಸರ್ಕಾರದ ಇದುವರೆಗಿನ ಸಾಧನೆಗಳು, ಮುಂದಿನ ಯೋಜನೆಗಳು ಮತ್ತು ಗುರಿಗಳನ್ನು ಹೊಂದಿರುವ ಅಂಶಗಳಿರುತ್ತದೆ. ಇದನ್ನು ರಾಜ್ಯಪಾಲರ ಮೂಲಕ, ಆಯಾಯ ಸರ್ಕಾರ ಸಾರ್ವಜನಿಕರ ಮುಂದೆ ಇಡುತ್ತದೆ. ಹಾಗಾಗಿ, ಈ ಭಾಷಣವನ್ನು ಸರ್ಕಾರವೇ ಸಿದ್ದಪಡಿಸಿಕೊಡುತ್ತದೆ.
ಸಾಮಾನ್ಯವಾಗಿ ಪ್ರತಿವರ್ಷ ಜನವರಿ.26ರ ಗಣರಾಜ್ಯೋತ್ಸವದಂದು ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಸರ್ಕಾರ ಬರೆದು ಕೊಟ್ಟಿರುವ ಭಾಷಣವನ್ನು ಓದುವುದು ಈವರೆಗೂ ನಡೆದುಕೊಂಡು ಬಂದ ಸಂಪ್ರದಾಯವಾಗಿತ್ತು.
ಆದರೆ ಮೊದಲ ಬಾರಿಗೆ ಕರ್ನಾಟಕದಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗದ ನಡುವೆ ನೇರಾನೇರ ಸಂಘರ್ಷ ಏರ್ಪಟ್ಟಿದೆ. ಒಂದು ಕಡೆ ಜಂಟಿ ಅಧಿವೇಶನ ವೇಳೆ ಸರ್ಕಾರದ ಭಾಷಣವನ್ನು ಓದದೆ ಕೇವಲ ಎರಡು ಸಾಲಿನಲ್ಲಿ ಓದಿ ಹೊರ ನಡೆದ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಳ್ಳಬೇಕೆಂದು ಆಡಳಿತರೂಢ ಕಾಂಗ್ರೆಸ್ ಪಟ್ಟು ಹಿಡಿದಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…