ರಾಜ್ಯ

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ ಹಂಗಾಮ ಸೃಷ್ಟಿಸಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಇದೀಗ ಗಣರಾಜ್ಯೋತ್ಸವ ಭಾಷಣಕ್ಕೂ ಕ್ಯಾತೆ ತೆಗೆಯುವ ಮೂಲಕ ಮತ್ತೊಂದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದ್ದಾರೆ.

ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರ ಪುನಃ ಕೇಂದ್ರ ಸರ್ಕಾರದಿಂದ ಉಂಟಾಗಿರುವ ಅನ್ಯಾಯಗಳನ್ನು ಸೇರ್ಪಡೆ ಮಾಡಿದೆ ಎಂದು ತಿಳಿದುಬಂದಿದೆ.

ಭಾಷಣದಲ್ಲಿ ಸರ್ಕಾರದ ಇದುವರೆಗಿನ ಸಾಧನೆಗಳು, ಮುಂದಿನ ಯೋಜನೆಗಳು ಮತ್ತು ಗುರಿಗಳನ್ನು ಹೊಂದಿರುವ ಅಂಶಗಳಿರುತ್ತದೆ. ಇದನ್ನು ರಾಜ್ಯಪಾಲರ ಮೂಲಕ, ಆಯಾಯ ಸರ್ಕಾರ ಸಾರ್ವಜನಿಕರ ಮುಂದೆ ಇಡುತ್ತದೆ. ಹಾಗಾಗಿ, ಈ ಭಾಷಣವನ್ನು ಸರ್ಕಾರವೇ ಸಿದ್ದಪಡಿಸಿಕೊಡುತ್ತದೆ.

ಸಾಮಾನ್ಯವಾಗಿ ಪ್ರತಿವರ್ಷ ಜನವರಿ.26ರ ಗಣರಾಜ್ಯೋತ್ಸವದಂದು ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಸರ್ಕಾರ ಬರೆದು ಕೊಟ್ಟಿರುವ ಭಾಷಣವನ್ನು ಓದುವುದು ಈವರೆಗೂ ನಡೆದುಕೊಂಡು ಬಂದ ಸಂಪ್ರದಾಯವಾಗಿತ್ತು.

ಆದರೆ ಮೊದಲ ಬಾರಿಗೆ ಕರ್ನಾಟಕದಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗದ ನಡುವೆ ನೇರಾನೇರ ಸಂಘರ್ಷ ಏರ್ಪಟ್ಟಿದೆ. ಒಂದು ಕಡೆ ಜಂಟಿ ಅಧಿವೇಶನ ವೇಳೆ ಸರ್ಕಾರದ ಭಾಷಣವನ್ನು ಓದದೆ ಕೇವಲ ಎರಡು ಸಾಲಿನಲ್ಲಿ ಓದಿ ಹೊರ ನಡೆದ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಳ್ಳಬೇಕೆಂದು ಆಡಳಿತರೂಢ ಕಾಂಗ್ರೆಸ್ ಪಟ್ಟು ಹಿಡಿದಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

16 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago