ರಾಜ್ಯ

3 ಮಸೂದೆಗಳಿಗೆ ರಾಜ್ಯಪಾಲರ ನಕಾರ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್

ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ

ಬೆಂಗಳೂರು : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಸೇರಿದಂತೆ 3 ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.

ಮೈಸೂರಿನ ರಾಜವಂಶಸ್ಥೆ ಪ್ರಮೋದಾ ದೇವಿ ಅವರು, ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ಮಸೂದೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ಹಿಂತಿರುಗಿದ್ದಾರೆ.

ಈ ಎರಡು ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೇಳಿದ್ದಾರೆ. ಉಳಿದಂತೆ ರಾಜ್ಯ ಸರ್ಕಾರ ಕಳುಹಿಸಿದ್ದ 22 ಮಸೂದೆಗಳ ಪೈಕಿ 19 ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಈ ಸಂಬಂಧ ಶುಕ್ರವಾರ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿ, ಮಾಹಿತಿ ನೀಡಿದ್ದಾರೆ.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ವಿಧೇಯಕ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ದ್ವೇಷ ಭಾಷಣ ಮಸೂದೆ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲು ರಾಜ್ಯಪಾಲರು ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ. ರಾಷ್ಟ್ರಪತಿಗಳಿಗೂ ದ್ವೇಷ ಭಾಷಣ ಮಸೂದೆ ಕಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ಬಿಜೆಪಿ ನಾಯಕರು ಹಾಗೂ ಹಿಂದೂಪರ ಸಂಘಟನೆಗಳು ರಾಜ್ಯಪಾಲರಿಗೆ ಮನವಿ ಮಾಡಿದ್ದವು. ಈ ಹಿನ್ನೆಲೆ ಈ ಮಸೂದೆ ಬಗ್ಗೆ ರಾಜ್ಯಪಾಲರು ವಿಸ್ತೃತ ಪರಿಶೀಲನೆ ಮಾಡುವ ಸಾಧ್ಯತೆ ಇದೆ.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ: ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ, ನಿರ್ವಹಣೆಗಾಗಿ ಅಸ್ತಿತ್ವದಲ್ಲಿರುವ ಒಂದು ಪ್ರಾಧಿಕಾರವಾಗಿದ್ದು, ಇತ್ತೀಚೆಗೆ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರವು ಹೊಸ ಕಾಯ್ದೆ ಜಾರಿಗೆ ತಂದಿತ್ತು. ಆದರೆ ಮೈಸೂರು ರಾಜಮನೆತನದ ಆಸ್ತಿ ವಿವಾದಗಳಿಂದಾಗಿ ಇದರ ರಚನೆ ನ್ಯಾಯಾಲಯದಲ್ಲಿ ಇದೆ.

ರಾಜವಂಶಸ್ಥರ ವಾದವೇನು?
ಚಾಮುಂಡೇಶ್ವರಿ ದೇವಿಯು ಮೈಸೂರಿನ ರಾಜವಂಶಸ್ಥರ ಮನೆ ದೇವರಾಗಿದ್ದು, ಮೈಸೂರಿನ ಮಹಾರಾಜರು ದೇವಾಲಯದ ಪೋಷಕರಾಗಿದ್ದರು. ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡಿ ದೇವಾಲಯ ಮತ್ತು ಮಹಾಬಲೇಶ್ವರ, ನಾರಾಯಣಸ್ವಾಮಿ, ಉತ್ತನಹಳ್ಳಿ ಜ್ವಾಲಾಮುಖಿ ಮತ್ತು ನಂದಿ ದೇವಾಲಯಗಳು ಹಿಂದಿನ ರಾಜವಂಶಸ್ಥರ ಖಾಸಗಿ ಸ್ವತ್ತಾಗಿವೆ. ದೇವಾಲಯಗಳು ಮತ್ತು ಅವುಗಳು ಆಸ್ತಿಯನ್ನು ಅಕ್ರಮವಾಗಿ ರಾಜ್ಯ ಸರ್ಕಾರ ವಶಕ್ಕೆ ಪಡೆಯುವುದಕ್ಕೆ ರಾಜವಂಸ್ಥರು ಆಕ್ಷೇಪಿಸಿದ್ದು, ಚಾಮುಂಡಿ ಬೆಟ್ಟದ ಮಾಲೀಕತ್ವಕ್ಕೆ ಸಂಬಂಧಿಸಿದ ಪ್ರಕರಣವು ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಮೇಲ್ಮನವಿಯ ರೂಪದಲ್ಲಿ ವಿಚಾರಣೆಗೆ ಬಾಕಿ ಇರುವಾಗ ರಾಜ್ಯ ಸರ್ಕಾರವು ಕಾಯಿದೆ ರೂಪಿಸಿರುವುದು ಕಾನೂನುಬಾಹಿರ. ಶಾಸಕಾಂಗದ ಸಮರ್ಥತೆ ಮೀರಿ ಕಾಯಿದೆ ರೂಪಿಸಲಾಗಿದ್ದು, ಕಾಯಿದೆಯ ನಿಬಂಧನೆಗಳು ಅಸಾಂವಿಧಾನಿಕವಾಗಿವೆ. ಆಕ್ಷೇಪಾರ್ಹ ಕಾಯಿದೆಯು ಅರ್ಜಿದಾರೆ ಪ್ರಮೋದಾ ದೇವಿ ಒಡೆಯರ್ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವುದರಿಂದ ಅದನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

4 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

5 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

5 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

5 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

5 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

6 hours ago