ರಾಜ್ಯ

3 ಮಸೂದೆಗಳಿಗೆ ರಾಜ್ಯಪಾಲರ ನಕಾರ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್

ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ

ಬೆಂಗಳೂರು : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಸೇರಿದಂತೆ 3 ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.

ಮೈಸೂರಿನ ರಾಜವಂಶಸ್ಥೆ ಪ್ರಮೋದಾ ದೇವಿ ಅವರು, ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ಮಸೂದೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ಹಿಂತಿರುಗಿದ್ದಾರೆ.

ಈ ಎರಡು ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೇಳಿದ್ದಾರೆ. ಉಳಿದಂತೆ ರಾಜ್ಯ ಸರ್ಕಾರ ಕಳುಹಿಸಿದ್ದ 22 ಮಸೂದೆಗಳ ಪೈಕಿ 19 ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಈ ಸಂಬಂಧ ಶುಕ್ರವಾರ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿ, ಮಾಹಿತಿ ನೀಡಿದ್ದಾರೆ.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ವಿಧೇಯಕ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ದ್ವೇಷ ಭಾಷಣ ಮಸೂದೆ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲು ರಾಜ್ಯಪಾಲರು ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ. ರಾಷ್ಟ್ರಪತಿಗಳಿಗೂ ದ್ವೇಷ ಭಾಷಣ ಮಸೂದೆ ಕಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ಬಿಜೆಪಿ ನಾಯಕರು ಹಾಗೂ ಹಿಂದೂಪರ ಸಂಘಟನೆಗಳು ರಾಜ್ಯಪಾಲರಿಗೆ ಮನವಿ ಮಾಡಿದ್ದವು. ಈ ಹಿನ್ನೆಲೆ ಈ ಮಸೂದೆ ಬಗ್ಗೆ ರಾಜ್ಯಪಾಲರು ವಿಸ್ತೃತ ಪರಿಶೀಲನೆ ಮಾಡುವ ಸಾಧ್ಯತೆ ಇದೆ.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ: ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ, ನಿರ್ವಹಣೆಗಾಗಿ ಅಸ್ತಿತ್ವದಲ್ಲಿರುವ ಒಂದು ಪ್ರಾಧಿಕಾರವಾಗಿದ್ದು, ಇತ್ತೀಚೆಗೆ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರವು ಹೊಸ ಕಾಯ್ದೆ ಜಾರಿಗೆ ತಂದಿತ್ತು. ಆದರೆ ಮೈಸೂರು ರಾಜಮನೆತನದ ಆಸ್ತಿ ವಿವಾದಗಳಿಂದಾಗಿ ಇದರ ರಚನೆ ನ್ಯಾಯಾಲಯದಲ್ಲಿ ಇದೆ.

ರಾಜವಂಶಸ್ಥರ ವಾದವೇನು?
ಚಾಮುಂಡೇಶ್ವರಿ ದೇವಿಯು ಮೈಸೂರಿನ ರಾಜವಂಶಸ್ಥರ ಮನೆ ದೇವರಾಗಿದ್ದು, ಮೈಸೂರಿನ ಮಹಾರಾಜರು ದೇವಾಲಯದ ಪೋಷಕರಾಗಿದ್ದರು. ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡಿ ದೇವಾಲಯ ಮತ್ತು ಮಹಾಬಲೇಶ್ವರ, ನಾರಾಯಣಸ್ವಾಮಿ, ಉತ್ತನಹಳ್ಳಿ ಜ್ವಾಲಾಮುಖಿ ಮತ್ತು ನಂದಿ ದೇವಾಲಯಗಳು ಹಿಂದಿನ ರಾಜವಂಶಸ್ಥರ ಖಾಸಗಿ ಸ್ವತ್ತಾಗಿವೆ. ದೇವಾಲಯಗಳು ಮತ್ತು ಅವುಗಳು ಆಸ್ತಿಯನ್ನು ಅಕ್ರಮವಾಗಿ ರಾಜ್ಯ ಸರ್ಕಾರ ವಶಕ್ಕೆ ಪಡೆಯುವುದಕ್ಕೆ ರಾಜವಂಸ್ಥರು ಆಕ್ಷೇಪಿಸಿದ್ದು, ಚಾಮುಂಡಿ ಬೆಟ್ಟದ ಮಾಲೀಕತ್ವಕ್ಕೆ ಸಂಬಂಧಿಸಿದ ಪ್ರಕರಣವು ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಮೇಲ್ಮನವಿಯ ರೂಪದಲ್ಲಿ ವಿಚಾರಣೆಗೆ ಬಾಕಿ ಇರುವಾಗ ರಾಜ್ಯ ಸರ್ಕಾರವು ಕಾಯಿದೆ ರೂಪಿಸಿರುವುದು ಕಾನೂನುಬಾಹಿರ. ಶಾಸಕಾಂಗದ ಸಮರ್ಥತೆ ಮೀರಿ ಕಾಯಿದೆ ರೂಪಿಸಲಾಗಿದ್ದು, ಕಾಯಿದೆಯ ನಿಬಂಧನೆಗಳು ಅಸಾಂವಿಧಾನಿಕವಾಗಿವೆ. ಆಕ್ಷೇಪಾರ್ಹ ಕಾಯಿದೆಯು ಅರ್ಜಿದಾರೆ ಪ್ರಮೋದಾ ದೇವಿ ಒಡೆಯರ್ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವುದರಿಂದ ಅದನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

8 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

22 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

22 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

22 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

22 hours ago