ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.
ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದ್ದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ನಿಯಮ ಸಂಬಂಧಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದು ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜನವರಿ 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ, ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಿರಬೇಕು ಎಂದು ʼಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆʼಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು. ಸುಗ್ರೀವಾಜ್ಞೆಯನ್ನು ಹೊರಡಿಸಲು ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಆದರೆ ರಾಜ್ಯಪಾಲರು ಅದನ್ನು ವಿಧಾನಸಭೆಯಲ್ಲಿ ಅಂಗೀಕರಿಸುವಂತೆ ಸೂಚನೆ ನೀಡಿದ್ದಾರೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…