ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಪ್ರಕರಣದಲ್ಲಿ ಹಕ್ಕುಚ್ಯುತಿ ಉಲ್ಲಂಘನೆ ಮಾಡಿರುವ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ.
ಈ ಪ್ರಕರಣವು ಒಬ್ಬ ಜನಪ್ರತಿನಿಧಿಗೆ ಸಂಬಂಧಿಸಿದ ವಿಷಯವಾಗಿದೆ. ಮುಖ್ಯಮಂತ್ರಿಗಳ ಮಧ್ಯಪ್ರವೇಶ ಅಗತ್ಯವಾಗಿದ್ದು, ಹಕ್ಕುಚ್ಯುತಿ ಉಲ್ಲಂಘನೆ ಮಾಡಿರುವ ಪೊಲೀಸರ ವಿರುದ್ಧ ಕಾನೂನು ಕ್ರಮದ ಜೊತೆಗೆ ಶಿಸ್ತು ಕ್ರಮದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಬರೆದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ರಾಜಭವನಕ್ಕೆ ಬಂದಿದ್ದ ಸಿ.ಟಿ.ರವಿ ನೇತೃತ್ವದ ನಿಯೋಗವು ನನಗೆ ಲಿಖಿತ ದೂರು ಸಲ್ಲಿಸಿದ್ದು ಜನಪ್ರತಿನಿಧಿಯಾಗಿರುವ ನನ್ನನ್ನು ಅತ್ಯಂತ ಅಗೌರವ ಮತ್ತು ಅಮಾನವೀಯವಾಗಿ ಪೊಲೀಸರು ನಡೆಸಿಕೊಂಡಿದ್ದಾರೆ. ಅವರನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂದು ದೂರು ನೀಡಿದ್ದಾರೆ. ನಾನು ದೂರಿನ ಪ್ರತಿಯನ್ನು ತಮಗೆ ಕಳುಹಿಸಿಕೊಡುತ್ತೇನೆ ಎಂದು ರಾಜ್ಯಪಾಲರು ಹೇಳಿದ್ದಾರೆ.
ನನ್ನನ್ನು ಬಂಧಿಸಿದ ನಂತರ ಪೊಲೀಸರು ಒಂದು ರಾತ್ರಿ ಅಪಾಯಕಾರಿ ಪ್ರದೇಶದಲ್ಲಿ ತಿರುಗಾಡಿಸಿದರು. ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂಬ ಸಣ್ಣ ಸುಳಿವನ್ನೂ ಸಹ ನೀಡಲಿಲ್ಲ. ಪ್ರಭಾವಿ ಸಚಿವರ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯ ನಿರ್ವಹಿಸಿದ್ದಾರೆ. ನನ್ನನ್ನು ದೈಹಿಕ ಹಾಗೂ ಮಾನಸಿಕವಾಗಿಯೂ ಹಿಂಸೆ ನೀಡಿ ಹಲ್ಲೆ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹೀಗಾಗಿ ಪ್ರಕರಣವು ಗಂಭೀರ ಸ್ವರೂಪವಾಗಿರುವುದರಿಂದ ಕ್ರಮ ಜರುಗಿಸಬೇಕೆಂದು ಸೂಚಿಸಿದ್ದಾರೆ. ಉತ್ತರ ವಲಯ ಐಜಿಪಿ ಹಾಗೂ ಪ್ರಸ್ತುತ ಬೆಂಗಳೂರು ಪಶ್ಚಿಮ ವಲಯದ ಪೊಲೀಸ್ ಆಯುಕ್ತ ವಿಕಾಸ್ಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾಮಾರ್ಟಿನ್, ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ, ಇನ್ಸ್ಪೆಕ್ಟರ್ ಸೇರಿದಂತೆ ಹಲವರ ವಿರುದ್ಧ ಗಂಭೀರ ಸ್ವರೂಪದ ದೂರನ್ನು ಕೊಟ್ಟಿದ್ದಾರೆ.
ಪ್ರಕರಣವು ದಿನದಿಂದ ದಿನಕ್ಕೆ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣವು ಮುಗಿದ ಅಧ್ಯಾಯ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಆದರೆ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಸಿಐಡಿ ತನಿಖೆಗೆ ಆದೇಶ ನೀಡಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದ ಕೊನೆಯ ದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದಾರೆ ಎಂಬ ಆರೋಪವು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದೆ.
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…
ಕುಶಾಲನಗರ: ಹಿಟ್ ಅಂಡ್ ರನ್ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್…
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ…