ರಾಜ್ಯ

ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಿಎಂಗೆ ಪತ್ರ ಬರೆದ ರಾಜ್ಯಪಾಲ ಗೆಹ್ಲೋಟ್‌

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಪ್ರಕರಣದಲ್ಲಿ ಹಕ್ಕುಚ್ಯುತಿ ಉಲ್ಲಂಘನೆ ಮಾಡಿರುವ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ರಾಜ್ಯಪಾಲ ಥಾವರ್‌ ಚಂದ್ ಗೆಲ್ಹೋಟ್ ಮುಖ್ಯಮಂತ್ರಿ‌ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ.

ಈ ಪ್ರಕರಣವು ಒಬ್ಬ ಜನಪ್ರತಿನಿಧಿಗೆ ಸಂಬಂಧಿಸಿದ ವಿಷಯವಾಗಿದೆ. ಮುಖ್ಯಮಂತ್ರಿಗಳ ಮಧ್ಯಪ್ರವೇಶ ಅಗತ್ಯವಾಗಿದ್ದು, ಹಕ್ಕುಚ್ಯುತಿ ಉಲ್ಲಂಘನೆ ಮಾಡಿರುವ ಪೊಲೀಸರ ವಿರುದ್ಧ ಕಾನೂನು ಕ್ರಮದ ಜೊತೆಗೆ ಶಿಸ್ತು ಕ್ರಮದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಬರೆದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ರಾಜಭವನಕ್ಕೆ ಬಂದಿದ್ದ ಸಿ.ಟಿ.ರವಿ ನೇತೃತ್ವದ ನಿಯೋಗವು ನನಗೆ ಲಿಖಿತ ದೂರು ಸಲ್ಲಿಸಿದ್ದು ಜನಪ್ರತಿನಿಧಿಯಾಗಿರುವ ನನ್ನನ್ನು ಅತ್ಯಂತ ಅಗೌರವ ಮತ್ತು ಅಮಾನವೀಯವಾಗಿ ಪೊಲೀಸರು ನಡೆಸಿಕೊಂಡಿದ್ದಾರೆ. ಅವರನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂದು ದೂರು ನೀಡಿದ್ದಾರೆ. ನಾನು ದೂರಿನ ಪ್ರತಿಯನ್ನು ತಮಗೆ ಕಳುಹಿಸಿಕೊಡುತ್ತೇನೆ ಎಂದು ರಾಜ್ಯಪಾಲರು ಹೇಳಿದ್ದಾರೆ.

ನನ್ನನ್ನು ಬಂಧಿಸಿದ ನಂತರ ಪೊಲೀಸರು ಒಂದು ರಾತ್ರಿ ಅಪಾಯಕಾರಿ ಪ್ರದೇಶದಲ್ಲಿ ತಿರುಗಾಡಿಸಿದರು. ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂಬ ಸಣ್ಣ ಸುಳಿವನ್ನೂ ಸಹ ನೀಡಲಿಲ್ಲ. ಪ್ರಭಾವಿ ಸಚಿವರ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯ ನಿರ್ವಹಿಸಿದ್ದಾರೆ. ನನ್ನನ್ನು ದೈಹಿಕ ಹಾಗೂ ಮಾನಸಿಕವಾಗಿಯೂ ಹಿಂಸೆ ನೀಡಿ ಹಲ್ಲೆ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹೀಗಾಗಿ ಪ್ರಕರಣವು ಗಂಭೀರ ಸ್ವರೂಪವಾಗಿರುವುದರಿಂದ ಕ್ರಮ ಜರುಗಿಸಬೇಕೆಂದು ಸೂಚಿಸಿದ್ದಾರೆ. ಉತ್ತರ ವಲಯ ಐಜಿಪಿ ಹಾಗೂ ಪ್ರಸ್ತುತ ಬೆಂಗಳೂರು ಪಶ್ಚಿಮ ವಲಯದ ಪೊಲೀಸ್ ಆಯುಕ್ತ ವಿಕಾಸ್‍ಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾಮಾರ್ಟಿನ್, ಬೆಳಗಾವಿ ಎಸ್‍ಪಿ ಭೀಮಾಶಂಕರ್ ಗುಳೇದ, ಇನ್‍ಸ್ಪೆಕ್ಟರ್ ಸೇರಿದಂತೆ ಹಲವರ ವಿರುದ್ಧ ಗಂಭೀರ ಸ್ವರೂಪದ ದೂರನ್ನು ಕೊಟ್ಟಿದ್ದಾರೆ.

ಪ್ರಕರಣವು ದಿನದಿಂದ ದಿನಕ್ಕೆ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣವು ಮುಗಿದ ಅಧ್ಯಾಯ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಆದರೆ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಸಿಐಡಿ ತನಿಖೆಗೆ ಆದೇಶ ನೀಡಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದ ಕೊನೆಯ ದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದಾರೆ ಎಂಬ ಆರೋಪವು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

3 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

4 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

6 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

10 hours ago