ಬೆಂಗಳೂರು: ಕರ್ನಾಟಕ ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು.
ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಕಳೆದ 19 ತಿಂಗಳಿನಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಸಮಸ್ಯೆ ಉದ್ಭವಿಸಿಲ್ಲ. ಪೊಲೀಸ್ ಠಾಣೆಗಳು ಕೂಡ ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಸರ್ಕಾರ ಬಂದಾಗಿನಿಂದ ಗ್ಯಾರಂಟಿ ಯೋಜನೆಗಳಿಗೆ 70,000 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವರ್ಷಕ್ಕೆ 90,000 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ. ಸರ್ಕಾರ ಅಭಿವೃದ್ಧಿ ವೇಗ ಸದೃಢಗೊಳಿಸಿದೆ. ಆಡಳಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವಾಗಿ ಬಳಕೆಗೆ ಬದ್ಧವಾಗಿದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹಾಲಿನ ಉತ್ಪಾದನೆಯಲ್ಲಿ ರಾಜ್ಯ ದಾಖಲೆ ಬರೆದಿದೆ. ದಿನಕ್ಕೆ ಕೆಎಂಎಫ್ 1 ಕೋಟಿ ಲೀಟರ್ ಹಾಲು ಸಂಗ್ರಹ ಮಾಡುತ್ತಿದ್ದು, ಇದುವರೆಗೆ ಪಶು ಪಾಲಕರಿಗೆ 1500 ಕೋಟಿ ಪ್ರೋತ್ಸಾಹ ಧನ ನೀಡಿದೆ. ಈ ಮೂಲಕ ಸರ್ಕಾರ ಆರ್ಥಿಕ ಶಿಸ್ತು ಕಾಯ್ದುಕೊಂಡಿದೆ ಎಂದು ಶ್ಲಾಘಿಸಿದರು.
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…
ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…
ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ…