ರಾಜ್ಯ

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ತೆರಳಿದರು.

ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ರಾಜ್ಯ ಸರ್ಕಾರ ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸುತ್ತಿದೆ.

ಭಾರೀ ಹೈಡ್ರಾಮಾ ಬಳಿಕ ಕೊನೆಗೂ ವಿಧಾನಸೌಧಕ್ಕೆ ಆಗಮಿಸಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೇ ತೆರಳಿದರು.

ಈ ವೇಳೆ ಬಿ.ಕೆ.ಹರಿಪ್ರಸಾದ್‌ ಅವರು ರಾಜ್ಯಪಾಲರನ್ನು ಅಡ್ಡಗಟ್ಟಿ ಭಾಷಣವನ್ನು ಸಂಪೂರ್ಣವಾಗಿ ಓದುವಂತೆ ಆಗ್ರಹಿಸಿದ್ದಾರೆ. ಆದರೆ ಯಾವುದಕ್ಕೂ ಕ್ಯಾರೇ ಎನ್ನದೇ ರಾಜ್ಯಪಾಲರು ಅಲ್ಲಿಂದ ತೆರಳಿದ್ದಾರೆ.

ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಮನರೇಗಾ ಬದಲು ವಿಬಿ ರಾಮ ಜೀ ಹೆಸರು ತಂದಿದ್ದಾರೆ. ಅದನ್ನು ನಾವು ವಿರೋಧ ಮಾಡಿದ್ದೇವೆ. ಇದನ್ನು ಕೂಲಂಕುಷವಾಗಿ ಚರ್ಚಿಸಲೆಂದೇ ಜಂಟಿ ಅಧಿವೇಶನ ಕರೆದಿದ್ದೇವೆ. ಆದರೆ ರಾಜ್ಯಪಾಲರು ನಾವು ಸಿದ್ಧಪಡಿಸಿರುವ ಭಾಷಣವನ್ನು ಓದದೇ ತೆರಳಿದ್ದಾರೆ. ಇದು ಸರಿಯಲ್ಲ. ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು ಎಂದು ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

11 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

12 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

14 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

14 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

16 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

16 hours ago