ರಾಜ್ಯ

ವಿಧಾನಮಂಡಲ ಬಜೆಟ್‌ ಅಧಿವೇಶನ: ಇಂದು ಸದನ ಉದ್ದೇಶಿಸಿ ಭಾಷಣ ಮಾಡಲಿರುವ ರಾಜ್ಯಪಾಲರು

ಬೆಂಗಳೂರು: ವಿಧಾನಸಭೆಯಲ್ಲಿ ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

ವಿಧಾನಮಂಡಲದಲ್ಲಿ ಇಂದು(ಮಾರ್ಚ್.‌3) ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು ಬೆಳಿಗ್ಗೆ 11 ಗಂಟೆಗೆ ಉಭಯ ಸದನಗಳ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ರಾಜ್ಯಪಾಲರಿಗೆ ಬೀಳ್ಕೊಟ್ಟು ಕಲಾಪ ಪ್ರಾಂರಭವಾಗಲಿದ್ದು, ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಿದ್ದಾರೆ.

ಮಾರ್ಚ್‌.4 ರಿಂದ 6 ರವರೆಗೂ ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆ ನಡೆಯಲಿದ್ದು, ಈ ವೇಳೆ ಆಡಳಿತ ಪಕ್ಷ ವಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪ ನಡೆಯಲಿದೆ. ಅಲ್ಲದೇ ಆಡಳಿತರೂಢ ಪಕ್ಷ ಕಟ್ಟಿಹಾಕುಲು ವಿಪಕ್ಷಗಳು ತಯಾರಿ ನಡೆಸಿದ್ದು, ರಾಜ್ಯಪಾಲರ ಸರ್ಕಾರದ ನಡುವಿನ ಜಟಾಪಟಿ, ಕಾನೂನು ಸುವ್ಯವಸ್ಥೆ, ಮೈಕ್ರೋ ಫೈನಾನ್ಸ್ ಕಿರುಕುಳ, ಬಾಣಂತಿ ಸಾವು, ಶಾಸಕರಿಗೆ ಅನುದಾನ ಕೊರತೆ, ಬಸ್, ಮೆಟ್ರೋ ಪ್ರಯಾಣ ದರ ಏರಿಕೆ, ವಿದ್ಯುತ್, ಹಾಲು, ನೀರಿನ ಬೆಲೆ ಏರಿಕೆ ಹಾಗೂ ಮುಡಾ ಪ್ರಕರಣ ಪ್ರತಿಪಕ್ಷಗಳಿಗೆ ಪ್ರಮುಖ ಅಸ್ತ್ರಗಳಾಗಿವೆ.

ಇನ್ನು ವಿರೋಧ ಪಕ್ಷಗಳಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ಪ್ರತ್ಯಸ್ತ್ರವನ್ನಿಟ್ಟುಕೊಂಡಿದ್ದು, ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆದ ಅನ್ಯಾಯ, ತೆರಿಗೆ ಪಾಲಿನ ವಂಚನೆ ಬಗ್ಗೆ ದಾಳಿ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ಹಾಗೂ ಕೋವಿಡ್‌ ಹಗರಣ ಕುರಿತ ಕುನ್ಹ ಸಮಿತಿ ವರದಿ ಪ್ರಸ್ತಾಪ ಮಾಡಲಿದ್ದಾರೆ. ಜೊತೆಗೆ ಮಹದಾಯಿ, ಕೃಷ್ಣ, ಮೇಕೆದಾಟು ಮೇಲ್ದಂಡೆ, ಭದ್ರಯೋಜನೆಗೆ ಸ್ಪಂದಿಸದ ಕೇಂದ್ರ ಸರ್ಕಾರ ಮುಂತಾದ ವಿಚಾರಗಳನ್ನಿಟ್ಟುಕೊಂಡು ಪ್ರತ್ಯುತ್ತರ ನೀಡಲು ಕಾಂಗ್ರೆಸ್‌ ಪಕ್ಷ ಸಜ್ಜಾಗಿದೆ.

ಈ ಮಧ್ಯೆ ನಾಳೆ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮಾರ್ಚ್‌.7 ರಂದು ಬಜೆಟ್‌ ಮಂಡನೆಯಾಗಲಿದೆ. ಅಲ್ಲದೇ ಮುಂದಿನ ವಾರ ಬಜೆಟ್‌ ಮುಂಗಡ ಪತ್ದ ಮೇಲೆ ಉಭಯ ಸದನಗಳಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ.

 

ಅರ್ಚನ ಎಸ್‌ ಎಸ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

10 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

11 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

16 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago