ರಾಜ್ಯ

ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ಹೊಸ ಯೋಜನೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂಬುದನ್ನು ಭಾಷಣ ಸ್ಪಷ್ಟವಾಗಿ ಸಾರಿದೆ ಎಂದು ಹೇಳಿದ್ದಾರೆ.

ಗ್ಯಾರಂಟಿಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಿಂದ ಅಸಮಾನತೆ ತಗ್ಗಿದ್ದರೆ, ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕ ರಾಜ್ಯ ಮಾಡುವ ನಿಟ್ಟಿನಲ್ಲಿ ಸಮಗ್ರ ಹಾಗೂ ಸಮರ್ಥ ಪ್ರಯತ್ನ ಮಾಡುವ ಸಂಕಲ್ಪ ರಾಜ್ಯದ ಜನರಲ್ಲಿ ಮತ್ತು ಹೂಡಿಕೆದಾರರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಖಂಡ್ರೆ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶವೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಪ್ರಾದೇಶಿಕ ಅಸಮತೋಲದಿಂದ ನಲುಗಿವೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು 2002ರಲ್ಲಿ ರಚಿಸಲಾಗಿದ್ದ ಡಾ. ಡಿ.ಎಂ. ನಂಜುಂಡಪ್ಪ ವರದಿ ಆಧರಿಸಿ ಈವರೆಗೆ 37662 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ವೆಚ್ಚ ಮಾಡಿದ ಸಂಪನ್ಮೂಲದ ಪರಿಣಾಮ ಹಾಗೂ ಮುಂದುವರಿದ ಪ್ರಾದೇಶಿಕ ಅಸಮತೋಲನ ಕುರಿತು ಅಧ್ಯಯನ ಮಾಡಲು ನೇಮಕ ಮಾಡಲಾಗಿರುವ ಸಮಿತಿ ನೀಡುವ ವರದಿ ಆಧರಿಸಿ ಅಭಿವೃದ್ಧಿಗೆ ಮುಂದಾಗುವುದಾಗಿ ಘೋಷಿಸಿರುವುದು ಉತ್ತಮ ನಡೆಯಾಗಿದೆ.

ವಸತಿ ಸಮಸ್ಯೆಯ ಪರಿಹಾರಕ್ಕೆ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ, ಯುವಜನರ ಕೌಶಲ್ಯಾಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳ ಬಗ್ಗೆಯೂ ಭಾಷಣದಲ್ಲಿ ಪ್ರಸ್ತಾಪಿಸಲಾಗಿದ್ದು, ಇದೆಲ್ಲವೂ ಯುವ ಜನರಲ್ಲಿ ಹೊಸ ಚೈತನ್ಯ ಮೂಡಿಸುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅರಣ್ಯ ಇಲಾಖೆಯ ಸಾಧನೆ ಪ್ರಸ್ತಾಪಕ್ಕೆ ಸಂತಸ:
ರಾಜ್ಯಪಾಲರ ಭಾಷಣದಲ್ಲಿ ಅರಣ್ಯ, ಪರಿಸರ ಇಲಾಖೆಯ ಕಾರ್ಯಸಾಧನೆಯ ಪ್ರಸ್ತಾಪ ಸಂತಸ ತಂದಿದೆ. ಅರಣ್ಯ ಒತ್ತುವರಿ ತೆರವು, ಹೊಸ ಅರಣ್ಯ ಪ್ರದೇಶದ ಸೇರ್ಪಡೆ, ಬೆಂಗಳೂರಿನಲ್ಲಿ ಹೊಸದಾಗಿ 153 ಎಕರೆ ಪ್ರದೇಶದಲ್ಲಿ ಬೃಹತ್ ಉದ್ಯಾನ ನಿರ್ಮಾಣ, ಬೆಂಗಳೂರು ನಗರದಲ್ಲಿ ಹಸಿರು ವಲಯ ಸಂರಕ್ಷಿಸಲು ಮತ್ತು ಪಕ್ಷಿಗಳ ನೆಲೆ ಕಾಪಾಡಲು 5678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವುದನ್ನೂ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿರುವುದು ಪರಿಸರ ಸಂರಕ್ಷಣೆಯ ತಮ್ಮ ಕಾರ್ಯಕ್ಕೆ ಮತ್ತಷ್ಟು ಸ್ಫೂರ್ತಿ ತಂದಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

4 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

7 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

7 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

8 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

9 hours ago